Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಚುನಾವಣಾ ಆಯೋಗ ಸ್ಪಷ್ಟನೆ 
Uncategorized

BIG NEWS : ರಾಜ್ಯದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಚುನಾವಣಾ ಆಯೋಗ ಸ್ಪಷ್ಟನೆ 

By kannadanewsnow0717/09/2025 5:20 PM
ಬೆಂಗಳೂರು : ಸುಮಾರು 23 ವರ್ಷಗಳ ನಂತರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಾಗಿದ್ದು, ರಾಜ್ಯದಲ್ಲೂ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ನಡೆಯಲಿದೆ. ರಾಜ್ಯ ಮುಖ್ಯ ಚುನಾವಣಾ ಆಯೋಗ ಇದರ ಪೂರ್ವ ಸಿದ್ದತೆ ಆರಂಭಿಸಿದೆ. ಈ ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾ‌ರ್ ಮಾಹಿತಿ ನೀಡಿದರು.
ರಾಜ್ಯದಲ್ಲಿ 2002ರಲ್ಲಿ ಎಸ್‌ಐಆರ್ ನಡೆಸಲಾಗಿತ್ತು. ಇದೀಗ 23 ವರ್ಷಗಳ ನಂತರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪ್ರತಿ ಮತದಾರರ ಮನೆಗೂ ಹೋಗಿ ಮತದಾರರ ಗುರುತಿನ ಚೀಟಿ ಪರಿಶೀಲಿಸಲಿದ್ದಾರೆ. 2002ರ ಮತದಾರರ ವಿಶೇಷ ಪರಿಷ್ಕರಣೆ ಪಟ್ಟಿ ಹಾಗೂ 2025ರ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳನ್ನು ಪರಿಶೀಲಿಸಲಾಗುವುದು.
ಮನೆಯಲ್ಲಿ ಯಾರೂ ಲಭ್ಯವಿರದಿದ್ದರೆ ಬಿಎಲ್‌ಒಗಳು ಮೂರು ಬಾರಿ ಭೇಟಿ ನೀಡಲಿದ್ದು, ಪಕ್ಕದ ಮನೆಯವರ ಸಹಾಯದಿಂದ ಸಂಪರ್ಕ ಸಾಧಿಸಲಿದ್ದಾರೆ. ಮತದಾರರ ಗುರುತಿನ ಚೀಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಇರದಿದ್ದರೆ ಮತದಾರರು ಹೊಸ ಫೋಟೋ ನೀಡಬೇಕು. ಪ್ರತಿಯೊಬ್ಬ ಮತದಾರರು ಆಯೋಗ ಕೇಳಿರುವ ಒಂದು ದಾಖಲೆಯನ್ನು ಕಡ್ಡಾಯವಾಗಿ ನೀಡಬೇಕು. ಪ್ರಸ್ತುತ ಎಸ್​ಐಆರ್​ನಲ್ಲಿ ದಾಖಲೆ ನೀಡಿದರೆ, ಮುಂದಿನ ಪರಿಷ್ಕರಣೆಯಲ್ಲಿ ಮತ್ತೆ ದಾಖಲೆ ಕೇಳುವುದಿಲ್ಲ. ಮನೆಯಲ್ಲಿ ಲಭ್ಯವಿಲ್ಲದವರು ಆನ್​ಲೈನ್​ನಲ್ಲೂ ಅರ್ಜಿ ಹಾಕಬಹುದು.
ಬಿಎಲ್‌ಒಗಳು ಮನೆ ಭೇಟಿಯ ವೇಳೆ ಪ್ರತಿ ಮನೆಗೂ ಎರಡು ನಮೂನೆಗಳನ್ನು ನೀಡಿ ಮಾಹಿತಿ ಪಡೆಯಲಿದ್ದಾರೆ. ಅದರಲ್ಲಿ ಒಂದು ನಮೂನೆಯನ್ನು ಅಧಿಕಾರಿಗಳು ಸಹಿ ಮಾಡಿ ಮತದಾರರಿಗೆ ಹಿಂತಿರುಗಿಸಲಿದ್ದಾರೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಂತರವೂ ಮತದಾರರ ಹೆಸರಿಲ್ಲದಿದ್ದರೆ ಬಿಎಲ್‌ಒಗಳು ನೀಡಿರುವ ಸಹಿ ಮಾಡಿದ ನಮೂನೆ ಮೂಲಕ ಪ್ರಶ್ನಿಸಬಹುದು. ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ನಿನ್ನೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
Share. Facebook Twitter LinkedIn WhatsApp Email

Related Posts

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM2 Mins Read

​ತೈಲ ಉಳಿಸಲು ಶ್ರೀಲಂಕಾ ಮಾಸ್ಟರ್ ಪ್ಲಾನ್: ಇನ್ನು ಮುಂದೆ ಪ್ರತಿ ಬುಧವಾರ ಸರ್ಕಾರಿ ರಜೆ ಘೋಷಣೆ!

17/03/2026 10:49 AM1 Min Read

ALERT : ಅಪ್ಪಿ ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಬೇಡಿ !

15/03/2026 12:31 PM2 Mins Read
Recent News

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
State News
KARNATAKA

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

By kannadanewsnow0909/04/2026 10:56 PM KARNATAKA 1 Min Read

ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಗರದ ಎಂಡಿಎಫ್ (MDF) ಸ್ವತಂತ್ರ ವಿಜ್ಞಾನ ಹಾಗೂ ವಾಣಿಜ್ಯ ಪದವಿ…

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.