ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಸೂಕ್ತ ಕಾನೂನು ತರುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾಲ್ತುಳಿತ ಘಟನೆಯಿಂದ ರಾಜ್ಯ ಪಾಠ ಕಲಿತಿದ್ದು, ಭವಿಷ್ಯದಲ್ಲಿ ಸಾರ್ವ ಜನಿಕ ಸಭೆಯ ನಿರ್ವಹಣೆಗಾಗಿ ಸೂಕ್ತ ಕಾಯ್ದೆ ತರುತ್ತೇವೆ. ಭವಿಷ್ಯದಲ್ಲಿ ಜನ ಸಮೂಹ ನಿಯಂತ್ರಕ್ಕೆ ಒಂದು ಯೋಜನೆ ತರುತ್ತೇವೆ ಎಂದರು.
ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು.