Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರನೌತ್ ನೇಮಕ

18/06/2025 1:26 PM

ತತ್ಕಾಲ್ ಟಿಕೆಟ್ಗಳಿಗೆ ಇ-ಆಧಾರ್ ದೃಢೀಕರಣ ಕಡ್ಡಾಯ: ನಿಮ್ಮ ಐಆರ್ಸಿಟಿಸಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

18/06/2025 1:20 PM

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕಕ್ಕೆ ವಿತ್ತ ಸಚಿವೆ ನಿರ್ಮಲಾ‌ ಸೀತಾರಾಮನ್ ಕೊಡುಗೆ ಏನು? : ಗೃಹ ಸಚಿವ ಜಿ.ಪರಮೇಶ್ವರ
KARNATAKA

BIG NEWS : ಕರ್ನಾಟಕಕ್ಕೆ ವಿತ್ತ ಸಚಿವೆ ನಿರ್ಮಲಾ‌ ಸೀತಾರಾಮನ್ ಕೊಡುಗೆ ಏನು? : ಗೃಹ ಸಚಿವ ಜಿ.ಪರಮೇಶ್ವರ

By kannadanewsnow0503/02/2025 3:08 PM

ಬೆಂಗಳೂರು : ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಮಲಾ‌ ಸೀತಾರಾಮನ್ ಅವರು ದೇಶದ ಹಣಕಾಸು ಸಚಿವರು. ಅವರ ಬಗ್ಗೆ ನಮಗೆಲ್ಲ ಗೌರವ ಇರಬೇಕು. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಹೋಗಿ ಕರ್ನಾಟಕದ ಹಿತವನ್ನು ಕಾಪಾಡುವುದಕ್ಕೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ಬಾರಿಯಷ್ಟೇ ಅಲ್ಲ. ಕಳೆದ ಬಾರಿಯು ಸಹ ನಮ್ಮ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು ರಾಜ್ಯಕ್ಕೆ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವಂತಹ ಒಂದೇಒಂದು ಯೋಜನೆಯನ್ನು ನೀಡಿಲ್ಲ. ಆ ರೀತಿ ಕೆಲಸ‌ ಮಾಡಿದ್ದರೆ ನಾನು ಸಹ ಅವರನ್ನು ಅಭಿನಂದಿಸುತ್ತೇನೆ ಎಂದರು.

ಸುಮ್ಮನೆ ಕರ್ನಾಟಕದಲ್ಲಿ ಹೀಗಿದೆ, ಹಾಗೀದೆ ಅಂದರೆ ಒಪ್ಪುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ರೂ. ಕೊಡುತ್ತೇವೆ. ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಬಜೆಟ್‌ನಲ್ಲಿ ಓದಿ, ಅನುದಾನ ನೀಡದಿರುವುದಕ್ಕೆ ಏನು ಉತ್ತರ ಕೊಡುತ್ತಾರೆ ಎಂದು ಪ್ರಶ್ನಿಸಿದರು.ನಾವು ರಾಜ್ಯದ ಬಡ ಜನರ ಹಿತದೃಷ್ಟಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದೇವೆ. ಬೇರೆ ಕಾರಣಗಳಿಗಾಗಿ ಗ್ಯಾರಂಟಿ ಯೋಜನೆಗಳನ್ನು ತಂದಿಲ್ಲ. ಹಳ್ಳಿಗಾಡಿನಲ್ಲಿ ಮಹಿಳೆಯರು 2000 ರೂ. ತೆಗೆದುಕೊಂಡು ಒಳ್ಳೆಯದಕ್ಕೆ ಬಳಸುತ್ತಿದ್ದಾರೆ. ಒಬ್ಬ ಮಹಿಳೆಯು ತನ್ನ ಮಗಳಿಗೆ ಹೊಸ ಕಂಪ್ಯೂಟರ್ ಖರೀದಿಸಿ ಕೊಟ್ಟಿದ್ದಾಳೆ. ಇಂತಹ ಅನೇಕ ಉದಾಹರಣೆಗಳನ್ನು ಕಾಣಬಹುದು. ಕರ್ನಾಟಕ ಸರ್ಕಾರದಲ್ಲಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಹೇಳುವುದು ಸರಿಯಲ್ಲ. ರಾಜ್ಯಕ್ಕೆ ನೀವು ಮಾಡಿರುವುದು ಏನು ಎಂಬುದಾಗಿ ಪ್ರಶ್ನಿಸಬೇಕಾಗುತ್ತದೆ ಎಂದರು.

ಸಚಿವೆ ನಿರ್ಮಲಾ‌ ಸೀತಾರಸಮನ್ ಅವರು ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಹಣಕಾಸು ಸಚಿವರಾಗಿದ್ದಾರೆ. ಕರ್ನಾಟಕಕ್ಕೆ ಕಳೆದ ಬಾರಿಗಿಂತ ಕಡಿಮೆ ಬಜೆಟ್ ನೀಡಿರುವುದು ನಮಗೆ ನಾಚಿಕೆಯಾಗುತ್ತದೆ. ಯಾವ ರೀತಿ ನಾವು ಸಮಜಾಯಿಸಿಕೊಳ್ಳಬೇಕು. ಅವರು ಅನುದಾನ ನೀಡಿದರೆ ಪಕ್ಷವನ್ನು ನೋಡದೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘಿಸುತ್ತೇವೆ. ಯಾವುದಾದರು ಒಂದು ಯೋಜನೆಯನ್ನಾದರೂ ಕರ್ನಾಟಕಕ್ಕೆ ನೀಡಬೇಕಲ್ಲವೇ? ನೀರಾವರಿ ಯೋಜನೆ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಅನುದಾನ ನೀಡಬೇಕಿತ್ತು. ಬೆಂಗಳೂರಿಗೆ ಬರೀ 5 ಸಾವಿರ ಕೋಟಿ ರೂ. ಕೊಟ್ಟಿದ್ದೇನೆ ಎಂದರೆ ಸಾಲುತ್ತದೆಯೇ? ಬೆಂಗಳೂರು ಇಡೀ ದೇಶಕ್ಕೆ ಸಂಬಂಧಿಸಿದ ನಗರ. ಅನಾವಶ್ಯಕವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ನೀತಿ ಆಯೋಗ ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ಕರ್ನಾಟಕ 10ನೇ ಸ್ಥಾನಕ್ಕೆ ಇಳಿದಿರುವ ಕುರಿತು ಪ್ರತಿಕ್ರಿಯಿಸಿ, ನೀತಿ ಆಯೋಗದವರು ವರ್ಷಕ್ಕೆ ಒಂದೊಂದು ರೀತಿಯಲ್ಲಿ ಅಳತೆ ಗೋಲು ಇಟ್ಟುಕೊಳ್ಳುತ್ತಾರೆ. ಯಾವ ಉದ್ದೇಶದಿಂದ, ಯಾವ ಪ್ಯಾರಮೀಟರ್‌ನಿಂದ ಆ ರೀತಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

ಪಿಎಸ್ಐ ಅಕ್ರಮದ ತನಿಖೆಗೆ ಸಬಂಧಿಸಿದಂತೆ ಎಸ್ಐಟಿಯವರು ಅಶ್ವತ್ಥ್ ನಾರಾಯಣ ಅವರನ್ನು ಯಾವ ವಿಚಾರಕ್ಕೆ ವಿಚಾರಣೆಗೆ ಕರೆದಿದ್ದಾರೆ ಎಂಬುದರ ಬಗ್ಗೆ ಗೊತ್ತಿಲ್ಲ. ತನಿಖೆ ಇನ್ನು ಮುಗಿದಿಲ್ಲ. ಎಸ್ಐಟಿಯವರಿಗೆ ತನಿಖೆ ವೇಳೆ ಏನೆಲ್ಲ‌ ಮಾಹಿತಿ ಸಿಗುತ್ತದೆಯೋ, ಅದನ್ನು ಆಧರಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಕರೆಯುತ್ತಾರೆ ಎಂದರು.ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆಯನ್ನು ಹೈಕಮಾಂಡ್ ಗಮನಿಸುತ್ತಾರೆ. ನಾನು ಹೈಕಮಾಂಡ್‌ಗೆ ಹೇಳಲು ಆಗುತ್ತದೆಯೇ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಎಲ್ಲರು ಗೌರವ ಕೊಡಬೇಕು, ಕೊಡುತ್ತೇವೆ ಎಂದರು.

ಬೇರೆ ಪಕ್ಷದ ಶಾಸಕರಿಗೆ ಡಿ.ಕೆ.ಶಿವಕುಮಾರ್ ಅವರು ಬಹಿರಂಗವಾಗಿ ಆಹ್ವಾನ ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷರು ಹೇಳಿದ ಮೇಲೆ ಅದಕ್ಕೆ ಅರ್ಥ ಇರುತ್ತದೆ. ನಮ್ಮ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಬರುವವರನ್ನು ಸೇರಿಸಿಕೊಳ್ಳಲು ಯಾರ ವಿರೋಧವೂ ಇಲ್ಲ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಳ್ಳಬಾರದು ಎಂಬುದು ಅಧ್ಯಕ್ಷರಿಗೆ ಬಿಟ್ಟಿರುವ ವಿಚಾರ. ಇದಕ್ಕಾಗಿ ಅಧ್ಯಕ್ಷರನ್ನು ನೇಮಿಸಿರುತ್ತಾರೆ‌ ಎಂದು ಉತ್ತರಿಸಿದರು‌.

ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ಅನುದಾನ ಸಿಗುತ್ತಿಲ್ಲ. ಸಿಎಂ ಸಲಹೆಗಾರ ಹುದ್ದೆಗೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ ಎಂದಿರುವ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಆ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು. ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿಗಳು ಮಾತನಾಡುತ್ತಾರೆ. ಅವರು ಏನು ಮಾತನಾಡುತ್ತಾರೆ ಎಂಬುದು‌ ನಮಗೆ ಗೊತ್ತಾಗುವುದಿಲ್ಲ ಎಂದರು.ಅನುದಾನವಿಲ್ಲ ಎಂಬ ಅಭಿಪ್ರಾಯಗಳು ಮೊದಲು ಆಗಾಗ್ಗೆ ಬರುತ್ತಿದ್ದವು. ಸಿಎಲ್‌ಪಿ ಸಭೆ ಬಳಿಕ ಎಲ್ಲ ಶಾಸಕರಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ತದನಂತರ ಅಂತಹ ಬೆಳವಣಿಗೆಗಳು ಕಾಣುತ್ತಿಲ್ಲ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM1 Min Read

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM1 Min Read

BREAKING : ಬೆಂಗಳೂರಿನಲ್ಲಿ 10 ಲಕ್ಷ ರೂ.ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘BBMP’ ಅಧಿಕಾರಿ.!

18/06/2025 12:53 PM1 Min Read
Recent News

BREAKING: ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರನೌತ್ ನೇಮಕ

18/06/2025 1:26 PM

ತತ್ಕಾಲ್ ಟಿಕೆಟ್ಗಳಿಗೆ ಇ-ಆಧಾರ್ ದೃಢೀಕರಣ ಕಡ್ಡಾಯ: ನಿಮ್ಮ ಐಆರ್ಸಿಟಿಸಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

18/06/2025 1:20 PM

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

18/06/2025 1:11 PM

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM
State News
KARNATAKA

GOOD NEWS : ರಾಜ್ಯದ `ಡಿಪ್ಲೊಮಾ ಪದವೀಧರರಿಗೆ’ ಗುಡ್ ನ್ಯೂಸ್ : `ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

By kannadanewsnow5718/06/2025 1:11 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಯುವನಿಧಿಯಡಿ ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500…

BREAKING: ನಾಳೆ ನಂದಿಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದು |Karnataka Cabinet Meeting

18/06/2025 1:05 PM

BREAKING : ಬೆಂಗಳೂರಿನಲ್ಲಿ 10 ಲಕ್ಷ ರೂ.ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘BBMP’ ಅಧಿಕಾರಿ.!

18/06/2025 12:53 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.