ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ರೈತರೊಬ್ಬರು ಬೋರ್ವೆಲ್ ತಂತಿಯನ್ನು ಕಂಬಕ್ಕೆ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ವಿದ್ಯುತ್ ಪ್ರವಹಿಸಿ ರೈತ ಸಾವನ್ನಪ್ಪಿರುವ ಘಟನೆ ಕಲಿಕೇರಿ ಮತ್ತು ಮುಗದ ರಸ್ತೆಯಲ್ಲಿನ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ರೈತ ನಿಂಗಪ್ಪ (50) ಸಾವನ್ನಪ್ಪಿದ್ದರೆ. ಬೋರ್ವೆಲ್ ನ ತಂತಿ ಕಂಬಕ್ಕೆ ಕಟ್ಟುವಾಗ ಈ ಒಂದು ದುರಂತ ಸಂಭವಿಸಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.