Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ : ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ ಮಹಿಳಾ ಆಯೋಗ
KARNATAKA

BIG NEWS : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ : ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ ಮಹಿಳಾ ಆಯೋಗ

By kannadanewsnow0504/01/2025 6:50 PM

ಬೆಂಗಳೂರು : ಕಳೆದ ವರ್ಷ ರಾಜ್ಯದ ಬಳ್ಳಾರಿ ಬೆಳಗಾವಿ ರೈಚೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ವರದಿಯನ್ನು ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಹೆರಿಗೆಯ ನಂತರ ತಾಯಂದಿರ ಸಾವುಗಳ ಬಗ್ಗೆ ರಾಜ್ಯ ಮಹಿಳಾ ಆಯೋಗದ ವರದಿ ಗಂಭೀರ ಸಮಸ್ಯೆಗಳನ್ನು ಬಹಿರಂಗಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಅನುಚಿತ ನೈರ್ಮಲ್ಯ, ಸಿಬ್ಬಂದಿ ಕೊರತೆ, ಪೌಷ್ಟಿಕಾಂಶದ ಕೊರತೆ ಮತ್ತು ಸೂಕ್ತ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನು ವರದಿ ಉಲ್ಲೇಖಿಸಿದೆ. ತುರ್ತು ಆರೋಗ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ವರದಿ ಶಿಫಾರಸು ಮಾಡಿದೆ.

ವರದಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ನೀರಿನ ಟ್ಯಾಂಕ್‌ಗಳಲ್ಲಿ ಪಾಚಿಕಟ್ಟಿದ್ದು ನೀರು ಕಲುಷಿತಗೊಂಡಿದ್ದು ಅದೇ ನೀರು ಹೆರಿಗೆ ಕೊಠಡಿಗೂ ಸರಬರಾಜು ಆಗುತ್ತಿದೆ. ಆ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟಿರಿಯಾಗಳು ಇರುವ ಸಾಧ್ಯತೆ ಇದ್ದು ಪ್ರಾಣಾಪಾಯಕ್ಕೂ ಎಡೆಮಾಡಿಕೊಡುವ ಸಂಭವವಿರುತ್ತದೆ. ಹಾಗಾಗಿ ಆಸ್ಪತ್ರೆಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವುದು ಹಾಗೂ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕಾಲಕಾಲಕ್ಕೆ ಪರೀಕ್ಷೆ ಮಾಡಿಸಿ ಅಪಾಯಕಾರಿ ಬ್ಯಾಕ್ಟಿರಿಯಾ ಇಲ್ಲದೇ ಇರುವ ಬಗ್ಗೆ ಖಚಿತಪಡಿಸುವಂತೆ ಸೂಚಿಸಲಾಗಿದೆ.

ಗರ್ಭಿಣಿ ಸ್ತ್ರೀಯರಿಗೆ ಸರ್ಕಾರದಿಂದ ದೊರಕುತ್ತಿರುವ ಮೊಟ್ಟೆ ಮುಂತಾದ ಪೌಷ್ಠಿಕ ಆಹಾರಗಳು ಸರಿಯಾಗಿ ದೊರಕುತ್ತಿರುವುದಿಲ್ಲ. ಅವುಗಳನ್ನು ಸರಿಯಾಗಿ ವಿತರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡುವುದು.ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹೆರಿಗೆ ಕೊಠಡಿಗಳು, ICU, ವೆಂಟಿಲೇಟರ್ಸ್ ಗಳು ಇರುವಂತೆ ನೋಡಿಕೊಳ್ಳುವುದು ಹಾಗೂ ಅವುಗಳ ಸಂಖ್ಯೆಯನ್ನು ಹೆಚ್ಚಿಸುವುದು. ಎಕ್ಲ್ಯಾಂಪ್ಸಿಯ ಕಿಟ್ ಗಳು ಇರುವಂತೆ ನೋಡಿಕೊಳ್ಳುವುದು.

ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ಸ್ಕ್ಯಾನಿಂಗ್ ತಜ್ಞರು, ಸ್ತ್ರೀರೋಗ ತಜ್ಞರು, ರೇಡಿಯಾಲಜಿಸ್ಟ್ ಹಾಗೂ ಇತರೆ ಸಿಬ್ಬಂದಿಗಳ ಕೊರತೆ ಮುಖ್ಯವಾಗಿ ಎದ್ದು ಕಾಣುತ್ತಿದೆ. ರೋಗಿಗಳಿಗನುಸಾರವಾಗಿ ಎಲ್ಲಾ ಆಸ್ಪತ್ರೆಗಳಿಗೆ ಸಿಬ್ಬಂದಿಗಳನ್ನು ಶೀಘ್ರ ನೇಮಕ ಮಾಡಲು ಕ್ರಮ ವಹಿಸುವುದು.ಗರ್ಭಿಣಿಯರಿಗೆ ಯಥೇಚ್ಛವಾಗಿ ನೀರು ಕುಡಿಯುವಂತೆ ಮಾಹಿತಿ ನೀಡುವುದು. ಪ್ರತಿ ಎರಡು ತಿಂಗಳಿಗೊಮ್ಮೆ ಯೂರಿನ್ ರುಟೆನ್ ಟೆಸ್ಟ್ ಕಡ್ಡಾಯವಾಗಿ ಮಾಡುವುದು.

ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ಸ್ಕ್ಯಾನಿಂಗ್ ತಜ್ಞರು, ಸ್ತ್ರೀರೋಗ ತಜ್ಞರು, ರೇಡಿಯಾಲಜಿಸ್ಟ್ ಹಾಗೂ ಇತರೆ ಸಿಬ್ಬಂದಿಗಳ ಕೊರತೆ ಮುಖ್ಯವಾಗಿ ಎದ್ದು ಕಾಣುತ್ತಿದೆ. ರೋಗಿಗಳಿಗನುಸಾರವಾಗಿ ಎಲ್ಲಾ ಆಸ್ಪತ್ರೆಗಳಿಗೆ ಸಿಬ್ಬಂದಿಗಳನ್ನು ಶೀಘ್ರ ನೇಮಕ ಮಾಡಲು ಕ್ರಮ ವಹಿಸುವುದು.ಶಸ್ತ್ರ ಚಿಕಿತ್ಸೆ, ರಕ್ತ ಪರೀಕ್ಷೆಗಳನ್ನು ಮಾಡುವಾಗ ಉಪಕರಣಗಳನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕ ದ್ರಾವಣಗಳನ್ನು ಬಳಸುತ್ತಿರುವುದಿಲ್ಲ. ಸೋಂಕು ನಿವಾರಕ ದ್ರಾವಣಗಳಿಂದ ಉಪಕರಣಗಳನ್ನು ಸ್ವಚ್ಛಗೊಳಿಸಲು ಕ್ರಮವಹಿಸುವುದು. ಆಟೋ ಕ್ಷೇವ್ ವಿಧಾನದ ಮೂಲಕ ಸಾಧನಗಳನ್ನು ಸ್ಪೆರಲೈಸೇಶನ್ ಮಾಡುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM2 Mins Read

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM1 Min Read

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM2 Mins Read
Recent News

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

05/02/2026 9:43 AM
State News
KARNATAKA

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

By kannadanewsnow0505/02/2026 10:00 AM KARNATAKA 2 Mins Read

ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ…

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ‘ಆಸ್ತಿ ಮ್ಯುಟೇಷನ್’ ಇನ್ಮುಂದೆ ಆಟೋಮ್ಯಾಟಿಕ್.!

05/02/2026 9:59 AM

BIG NEWS : `ಪಿತ್ರಾರ್ಜಿತ ಆಸ್ತಿ’ ಪಡೆಯಲು `ವಂಶವೃಕ್ಷ’ದ ಜೊತೆಗೆ ಈ 5 ಪ್ರಮುಖ ದಾಖಲೆಗಳು ಕಡ್ಡಾಯ.!

05/02/2026 9:44 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

05/02/2026 9:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.