ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಬೈಕ್ ಖರೀದಿಸಲು ಹಣ ನೀಡಿಲ್ಲವೆಂದು ಪಾಪಿ ಮಗನೊಬ್ಬ ತಂದೆಯನ್ನೇ ಹತ್ಯೆಗೈದಿರುವ ಕೊಲೆ ಮಾಡಿರುವ ಘಟನೆ ಸುರುಪರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ನಡೆದಿದೆ.
ಹೌದು ಮಗ ಶೇಖರ್ ಎಂಬಾತ ತನ್ನ ತಂದೆ ಚೆನ್ನಾರೆಡ್ಡಿ ರಾಠೋಡ್ (50) ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೈಕ್ ಖರೀದಿಸಲು ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಮಗ ಶೇಖರ್ ಚೆನ್ನಾರೆಡ್ಡಿಯನ್ನು ಕೊಲೆ ಮಾಡಿದ್ದಾನೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ, ನಡೆಸುತ್ತಿದ್ದು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.