Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ನಾಡಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ‘ಜನಸಂಪರ್ಕ ಸಭೆ’

10/11/2025 4:47 PM

ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ

10/11/2025 4:29 PM

BREAKING : ‘4 ವಾರಗಳಲ್ಲಿ ಉತ್ತರಿಸಿ’ ; ರಾಜ್ಯ & ಲೋಕಸಭೆಯಲ್ಲಿ ‘ಮಹಿಳಾ ಮೀಸಲಾತಿ’ ಕುರಿತು ಕೇಂದ್ರ, ರಾಜ್ಯಗಳಿಗೆ ‘ಸುಪ್ರೀಂ’ ನೋಟಿಸ್

10/11/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `ಫಲಿತಾಂಶ’ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `ಫಲಿತಾಂಶ’ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5702/07/2025 6:09 AM

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಫಲಿತಾಂಶ ಹೆಚ್ಚಿಸಲು ರಾಜ್ಯ ಸರ್ಕಾರವು 5 ಅಂಶಗಳ ಮಾರ್ಗಸೂಚಿಯ ಸುತ್ತೋಲೆ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಪ್ರತಿದಿನ ಶಾಲೆಯ ಹಂತದಲ್ಲಿ ಭೋಧನೆ ಮತ್ತು ಕಲಿಕೆ ನಡೆಸಲು ಅನುವಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಉತ್ತಮ ಬೋಧನೆ ನೀಡಲು ಶಿಕ್ಷಕರೂ ಹಾಗೂ ಶಾಲಾ ಮುಖ್ಯೋಪಾಧ್ಯಾಯರೂ ಸಂಪೂರ್ಣವಾಗಿ ಶಾಲೆಯಲ್ಲಿ ಹಾಜರಿರುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು. ಡಯಟ್ ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಹಾಗೂ ಜಿಲ್ಲೆಯಲ್ಲಿ ಇರುವ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳು ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಲಾಗಿದೆ:

i) ಯಾವುದೇ ಶಿಕ್ಷಕರನ್ನು/ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ ಕಾರ್ಯಕ್ರಮಗಳಿಗೆ, ಕಾರ್ಯಾಗಾರಗಳಿಗೆ ಸಭೆಗಳಿಗೆ ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ, ಶಾಲಾ ಸಮಯದಲ್ಲಿ ನಿಯೋಜನೆ/ಓ.ಓ.ಡಿ, ಮೌಖಿಕ ಅಥವಾ ಲಿಖಿತ ಆದೇಶಗಳ ಮೂಲಕ ಕಳುಹಿಸಬಾರದು. ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಇಂತಹ ನಿರ್ದೇಶನಗಳನ್ನು ನೀಡಬಾರದು.

ii) ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮುಖ್ಯೋಪಾಧ್ಯಾಯರ ಯಾವುದೇ ಸಭೆಗಳನ್ನು ಕರೆಯಬಾರದು ಅಥವಾ ವಿಡಿಯೋ ಕಾನ್ಸರೆನ್ಸ್ (video conference) ಮಾಡಬಾರದು. ಶಾಲೆಗಳನ್ನು ಭೇಟಿ ನೀಡುವ ಯಾವುದೇ ಅಧಿಕಾರಿಗಳು ಶಾಲೆಯ ನಡೆದುಕೊಳ್ಳತಕ್ಕದ್ದು. ತರಗತಿಗಳಿಗೆ ತೊಂದರೆಯಾಗದಂತೆ

iii) ಯಾವುದೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಅವರ ಶಾಲೆಯ ಹೊರಗಡೆ ವಿವಿಧ ಕಾರ್ಯಕ್ರಮಗಳ ಪ್ರೇಕ್ಷಕರಾಗಿ ಭಾಗವಹಿಸಲು ಅಥವಾ ಕರೆದುಕೊಂಡು ಹೋಗಲು ನಿರ್ದೇಶಿಸಬಾರದು.

iv) ಶಾಲಾ ದಿನಗಳಲ್ಲಿ ಯಾವುದೇ ಬಾಹ್ಯ ಪರೀಕ್ಷೆಗಳನ್ನು (ಉದಾ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಥವಾ ಇತರ ರಾಜ್ಯ/ಕೇಂದ್ರ ಸರ್ಕಾರ/ಖಾಸಗಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳು) ಶಾಲೆಯ ಆವರಣದಲ್ಲಿ ನಡೆಸಬಾರದು. ಈ ನಿಬಂಧನೆಯನ್ನು ಉಲ್ಲಂಘಿಸಿದ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಇಂತಹ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕಾದ್ದಲ್ಲಿ, ಅದು ಸಾರ್ವಜನಿಕ ರಜೆ ಅಥವಾ ಬೇಸಿಗೆ ರಜೆಯ ಸಮಯದಲ್ಲಿ ಮಾತ್ರ ನಿಯಮಗಳಂತೆ ನೀಡುವುದು.

v) ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು. ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ಇಲಾಖೆಯ ಯಾವುದೇ ಮಟ್ಟದ ಅಧಿಕಾರಿಗಳು ಖಾಸಗಿ ಸಂಸ್ಥೆಗಳ ಅಥವಾ ಯಾವುದೇ ಜ್ಞಾನ ಪಾಲುದಾರರು ಸಾಫ್ಟ್ವೇರ್ಗಳಲ್ಲಿ ಡೇಟಾ ಎಂಟ್ರಿ ಮಾಡುವಂತೆ ಶಿಕ್ಷಕರು ಅಥವಾ ಶಾಲಾ ಮುಖ್ಯೋಪಾಧ್ಯಾಯರಿಗೆ ಮೌಖಿಕ ಅಥವಾ ಲಿಖಿತ ಆದೇಶ ನೀಡಬಾರದು. ಇಂತಹ ಆದೇಶ ನೀಡುವ ಯಾವುದೇ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.

ಈ ಮಾರ್ಗಸೂಚಿಗಳು ಮತ್ತು ನಿರ್ದೇಶನಗಳು ತಕ್ಷಣದಿಂದ ಜಾರಿಗೆ ಬರುತ್ತವೆ.

BIG NEWS: 5 guidelines to increase `results' in government schools in the state: Important order from the government!
Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ನಾಡಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ‘ಜನಸಂಪರ್ಕ ಸಭೆ’

10/11/2025 4:47 PM2 Mins Read

ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ

10/11/2025 4:29 PM1 Min Read

JDS ಪಕ್ಷದ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿ.ಟಿ ದೇವೇಗೌಡಗೆ ಕೋಕ್

10/11/2025 4:24 PM1 Min Read
Recent News

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ನಾಡಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ‘ಜನಸಂಪರ್ಕ ಸಭೆ’

10/11/2025 4:47 PM

ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ

10/11/2025 4:29 PM

BREAKING : ‘4 ವಾರಗಳಲ್ಲಿ ಉತ್ತರಿಸಿ’ ; ರಾಜ್ಯ & ಲೋಕಸಭೆಯಲ್ಲಿ ‘ಮಹಿಳಾ ಮೀಸಲಾತಿ’ ಕುರಿತು ಕೇಂದ್ರ, ರಾಜ್ಯಗಳಿಗೆ ‘ಸುಪ್ರೀಂ’ ನೋಟಿಸ್

10/11/2025 4:27 PM

JDS ಪಕ್ಷದ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿ.ಟಿ ದೇವೇಗೌಡಗೆ ಕೋಕ್

10/11/2025 4:24 PM
State News
KARNATAKA

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ನಾಡಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ‘ಜನಸಂಪರ್ಕ ಸಭೆ’

By kannadanewsnow0910/11/2025 4:47 PM KARNATAKA 2 Mins Read

ಶಿವಮೊಗ್ಗ: ನಾಡಿದ್ದು ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದೇ ನವೆಂಬರ್.12ರ…

ಗುಂಡ್ಲು ಪೇಟೆಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿ ರಕ್ಷಣೆ: ಸಚಿವ ಈಶ್ವರ್ ಖಂಡ್ರೆ

10/11/2025 4:29 PM

JDS ಪಕ್ಷದ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿ.ಟಿ ದೇವೇಗೌಡಗೆ ಕೋಕ್

10/11/2025 4:24 PM

ರಾಜ್ಯದ ಜನರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಲು ಇಂದೇ ಕೊನೆಯ ಅವಕಾಶ

10/11/2025 4:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.