Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

04/04/2026 4:11 AM
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪೋಕ್ಸೋ ಕೇಸಲ್ಲಿ ‘ಬಿಎಸ್ ಯಡಿಯೂರಪ್ಪ’ಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ | BS Yediyurappa
KARNATAKA

BREAKING: ಪೋಕ್ಸೋ ಕೇಸಲ್ಲಿ ‘ಬಿಎಸ್ ಯಡಿಯೂರಪ್ಪ’ಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ | BS Yediyurappa

By kannadanewsnow0914/06/2024 4:47 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಕಾರಣ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿತ್ತು. ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ನಡೆಸಿತು. ನ್ಯಾಯಪೀಠದ ಮುಂದೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೆಕ್ಷನ್ 8ರಡಿಯಲ್ಲಿ ಫೆಬ್ರವರಿ.2ರಂದು ನಡೆದಂತ ಘಟನೆಯ ಬಗ್ಗೆ ಮಾರ್ಚ್.14ರಂದು ಎಫ್ಐಆರ್ ದಾಖಲಾಗಿದೆ ಎಂದರು.

ಹೈಕೋರ್ಟ್ ನ್ಯಾಯಪೀಠವು ಪ್ರಕರಣದ ಮಹಿಳೆಯ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದಾಗ, ಎಜೆ ಶಶಿಕಿರಣ್ ಶೆಟ್ಟಿ ಅವರು ಮಹಿಳೆ ಮೃತಪಟ್ಟಿದ್ದಾರೆ. ಅವರಿಗೆ ಪುತ್ರಿ, ಎಂಜಿನಿಯರಿಂಗ್ ಓದಿದ ಮಗ ಇದ್ದಾನೆ. ಈವರೆಗೆ 53 ದೂರುಗಳನ್ನು ನೀಡಲಾಗಿದೆ. ಮಹಿಳೆಯ ವಿರುದ್ಧ 3 ಕ್ರಿಮಿನಲ್ ಕೇಸ್ ಗಳಿದ್ದಾವೆ. ವಂಚನ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತ ದೂರುಗಳು ದಾಖಲಾಗಿದ್ದಾವೆ ಎಂದರು.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, ಎಲ್ಲಾ ವಕೀಲರು ತಮ್ಮ ಎಮೋಷನ್ ಬಿಟ್ಟು ವಾದಿಸುವಂತೆ ಮನವಿ ಮಾಡಿದರು. ಜೂನ್.12ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಆದ್ರೇ ಅವರು ಹಾಜರಾಗಿರಲಿಲ್ಲ. ಹೀಗಾಗಿ ಬಂಧನದ ವಾರೆಂಟ್ ಪಡೆಯಲಾಗಿದೆ ಎಂಬುದಾಗಿ ನ್ಯಾಯಪೀಠಕ್ಕೆ ಎಜೆ ಶಶಿಕಿರಣ್ ಶೆಟ್ಟಿ ತಿಳಿಸಿದರು.

ಈ ವೇಳೆ ಗರಂ ಆದಂತ ನ್ಯಾಯಮೂರ್ತಿಗಳು ಯಡಿಯೂರಪ್ಪ ವಿಚಾರಣೆಗೆ ಬರಲ್ಲವೆಂದು ನೀವೇ ಏಕೆ ಭಾವಿಸಿದ್ರಿ? ಅವರು ಏನು ಟಾಮ್ ಡಕ್ ಅಂಡ್ ಹ್ಯಾರಿಯಲ್ಲ. ನೀವೇ ಬಂಧಿಸೋ ಅವಕಾಶವಿದ್ದಾಗ ಬಂಧನದ ವಾರೆಂಟ್ ಏಕೆ.? ಅಷ್ಟಕ್ಕೂ ಅವರನ್ನು ಏಕೆ ಬಂಧಿಸಬೇಕು ಎಂಬುದಾಗಿ ಎಜೆಗೆ ಪ್ರಶ್ನಿಸಿದರು.

ಆಗ ನ್ಯಾಯಪೀಠಕ್ಕೆ ಎಜೆ ಶಶಿಕಿರಣ್ ಶೆಟ್ಟಿ ಅವರು ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವಂತ ಯಡಿಯೂರಪ್ಪ ಅವರನ್ನು ಹೊರ ರಾಜ್ಯದಿಂದ ಬಂಧಿಸಬೇಕಿದೆ. ಅದಕ್ಕಾಗಿ ಬಂಧನದ ವಾರಂಟ್ ಪಡೆಯಲಾಗಿದೆ ಎಂಬುದಾಗಿ ಹೇಳಿದರು.

ಅಂತಿಮವಾಗಿ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ ನ್ಯಾಯಪೀಠವು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ್ದಂತ ಪೋಕ್ಸೋ ಪ್ರಕರಣ ರದ್ದು ಸಂಬಂಧ ಮಧ್ಯಂತರ ಆದೇಶ ಹೊರಡಿಸಿದ್ದು, ಅದರಲ್ಲಿ ಪ್ರಕರಣ ರದ್ದು ಕೋರಿದ್ದ ಅರ್ಜಿಯಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸಿಆರ್ ಪಿಸಿ 41ಎ ಅಡಿ ಮಾರ್ಚ್.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಬಿಎಸ್ ಯಡಿಯೂರಪ್ಪ ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ.

ವರದಿ: ವಸಂತ ಬಿ ಈಶ್ವರಗೆರೆ

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna

ನಾಸಾದಿಂದ ದೊಡ್ಡ ಎಚ್ಚರಿಕೆ! ಅತಿವೇಗದಲ್ಲಿ ಭೂಮಿಯತ್ತ ಬರುತ್ತಿದೆ ಕ್ಷುದ್ರಗ್ರಹ 2024 ಎಲ್ಎಲ್1 | NASA Alert

Share. Facebook Twitter LinkedIn WhatsApp Email

Related Posts

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM1 Min Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News

ಮಕ್ಕಳಲ್ಲಿನ ಲೈಂಗಿಕ ಕುತೂಹಲ ಮತ್ತು ನಡವಳಿಕೆ: ಪೋಷಕರು ತಿಳಿದಿರಲೇಬೇಕಾದ ಸತ್ಯಗಳು

04/04/2026 4:11 AM
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM

BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

03/04/2026 9:59 PM
State News
KARNATAKA

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

By kannadanewsnow0903/04/2026 10:07 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.