Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING :’ಪ್ರಧಾನಿ ಮೋದಿ’ ಭೇಟಿಯಾದ ಗಗನಯಾತ್ರಿ ‘ಶುಭಾಂಶು ಶುಕ್ಲಾ’

18/08/2025 7:40 PM

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
KARNATAKA

ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

By kannadanewsnow0524/03/2024 8:46 PM
high court
high court

ಮಂಗಳೂರು: ಇತ್ತೀಚಿಗೆ ಮಂಗಳೂರನಲ್ಲಿ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಅಲ್ಲದೆ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಉದ್ಯಮಿ, ಮಾಜಿ ಕಾಂಗ್ರೆಸ್ ನಾಯಕ ‘ನವೀನ್ ಜಿಂದಾಲ್’ ಬಿಜೆಪಿಗೆ ಸೇರ್ಪಡೆ | Naveen Jindal Joins BJP

ಫೆ.12ರಂದು ಜೆರೋಸಾ ಶಾಲೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪೈಲ್, ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಭರತ್ ಕುಮಾರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಶಾಲೆಯ ಬಳಿಯ ನಿವಾಸಿ ಅನಿಲ್ ಜೆರಾಲ್ಡ್ ಲೋಬೊ ಎಂಬವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ಆರೋಪಿಗಳು ಹೈಕೋರ್ಟ್ನಲ್ಲಿ ಜಾಮೀನು ಪಡೆದಿದ್ದರು.

ವಾದವನ್ನು ಆಲಿಸಿದ ಜಸ್ಟೀಸ್ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿ ಆದೇಶಿಸಿತು. ಜೆರೋಸಾ ಶಾಲೆಯ ವಿರುದ್ಧದ ಆರೋಪಗಳ ಬಗ್ಗೆ ಶಿಕ್ಷಣ ಇಲಾಖೆಯ ಕಲಬುರಗಿ ವಲಯ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ವಿಚಾರಣೆ ನಡೆಸಿ ವರದಿ ತಯಾರಿಸಿದ್ದಾರೆ.

ಇದಪ್ಪ ‘ಸಂಚಾರಿ ಪೊಲೀಸ್’ ಕೆಲಸ ಅಂದ್ರೆ.! ಈ ಸುದ್ದಿ ಓದಿ, ನೀವು ‘ಹ್ಯಾಟ್ಸ್ ಆಫ್’ ಹೇಳೋದು ಗ್ಯಾರಂಟಿ

ಏನಿದು ಪ್ರಕರಣ?

ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಅಯೋಧ್ಯೆ ಹಾಗೂ ಶ್ರೀರಾಮನಿಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಪೋಷಕರೊಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿದ್ದು, ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಸಂದೇಶ ಆ ಆಡಿಯೋದಲ್ಲಿತ್ತು. ಅದರಂತೆ ಶಾಲೆ ಆವರಣದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.

ಬಳಿಕ ಬಿಜೆಪಿ ನಾಯಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಆಕ್ರೋಶ ಹೊರಹಾಕಿದ್ದಲ್ಲದೆ, ವಿದ್ಯಾರ್ಥಿಗಳಿಂದ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿಸಿದರು. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯನ್ನು ಅಮಾತು ಮಾಡಿ ಆದೇಶಿಸಿತ್ತು. ಘಟನೆ ಕುರಿತು ಕ್ಷಮೆ ಕೇಳದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಒಂದೆಡೆಯಾದರೆ, ಮತ್ತೊಂದೆಡೆ ಶಿಕ್ಷಕಿ ಅಮಾನತುಗೊಂಡ ಹಿನ್ನೆಲೆ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು.

BREAKING : ಹುಬ್ಬಳ್ಳಿಯಲ್ಲಿ ಬೈಕ್ ಗೆ ‘KSRTC’ ಬಸ್ ಡಿಕ್ಕಿ : ಸ್ಥಳದಲ್ಲೇ ಸವಾರ ದುರ್ಮರಣ

ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್​ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM1 Min Read

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM1 Min Read

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM1 Min Read
Recent News

BREAKING :’ಪ್ರಧಾನಿ ಮೋದಿ’ ಭೇಟಿಯಾದ ಗಗನಯಾತ್ರಿ ‘ಶುಭಾಂಶು ಶುಕ್ಲಾ’

18/08/2025 7:40 PM

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

18/08/2025 7:35 PM

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM
State News
KARNATAKA

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

By kannadanewsnow0918/08/2025 7:35 PM KARNATAKA 1 Min Read

ಮಂಡ್ಯ : ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇ- ಪೌತಿ ಖಾತಾ ಆಂದೋಲನ ಆರಂಭಿಸಲಾಗಿದ್ದು,…

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

18/08/2025 7:31 PM

‘MLC ದಿನೇಶ್ ಗೂಳಿಗೌಡ’ಗೆ ‘ರಾಜ್ಯ ಸಚಿವರ ಸ್ಥಾನಮಾನ’ ನೀಡಿ ಸರ್ಕಾರ ಆದೇಶ

18/08/2025 7:03 PM

ಸಿನಿ ಪ್ರಿಯರ ಗಮನಕ್ಕೆ: PVR ಐನಾಕ್ಸ್ ಬೆಂಗಳೂರು, ಮುಂಬೈನಲ್ಲಿ 18 ಹೊಸ ತಲೆಮಾರಿನ ಪರದೆ ಪ್ರಾರಂಭ

18/08/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.