Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

02/07/2025 6:19 PM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

02/07/2025 6:13 PM

ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting

02/07/2025 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರಿ ನೌಕರರಿಗೆ’ ಬಿಗ್ ರಿಲೀಫ್: ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'(CLT) ಉತ್ತೀರ್ಣ ಅವಧಿ ವಿಸ್ತರಣೆ.!
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರರಿಗೆ’ ಬಿಗ್ ರಿಲೀಫ್: ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'(CLT) ಉತ್ತೀರ್ಣ ಅವಧಿ ವಿಸ್ತರಣೆ.!

By kannadanewsnow0918/01/2025 8:25 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಉತ್ತೀರ್ಣರಾಗುವಂತ ಅವಧಿಯನ್ನು ದಿನಾಂಕ 31-12-2025ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು ಎಂದಿದ್ದಾರೆ.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ದಿನಾಂಕ:31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ.
(ಎ) ಉಪ ನಿಯಮ (1)ರಲ್ಲಿ “ದಿನಾಂಕ: 31.12.2024 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ:31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಜ್ಞಾಪಿಸತಕ್ಕದ್ದು ಮತ್ತು
(ಬಿ) ಉಪ ನಿಯಮ (2)ರಲ್ಲಿ “ದಿನಾಂಕ: 31.12.2024ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂಬುದಾಗಿ ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BIG NEWS: ರಾಷ್ಟ್ರೀಯ, ನಾಡಹಬ್ಬಗಳಂದು ಶಾಲೆಗಳಲ್ಲಿ ‘ಬಿಸಿಯೂಟ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

BREAKING: ಬೆಂಗಳೂರಲ್ಲಿ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

02/07/2025 6:19 PM1 Min Read

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

02/07/2025 6:13 PM1 Min Read

ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting

02/07/2025 6:04 PM5 Mins Read
Recent News

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

02/07/2025 6:19 PM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

02/07/2025 6:13 PM

ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting

02/07/2025 6:04 PM

BREAKING : ‘AIFF’ ಮುಖ್ಯ ಕೋಚ್ ‘ಮನೋಲೋ ಮಾರ್ಕ್ವೆಜ್’ ವಜಾ |Manolo Marquez

02/07/2025 6:03 PM
State News
KARNATAKA

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

By kannadanewsnow0902/07/2025 6:19 PM KARNATAKA 1 Min Read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ…

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

02/07/2025 6:13 PM

ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting

02/07/2025 6:04 PM

ನೀವು ಇಂದು ರಾತ್ರಿ ಈ ರೀತಿ ಮಾಡಿ, ನಿಮ್ಮ ಹಣಕಾಸಿನ ಸಮಸ್ಯೆಗಳು ದೂರ

02/07/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.