Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ!

ದೇವೇಗೌಡರು ದೇಶದ ಪ್ರಧಾನಿಯಾಗಿ ಇಂದಿಗೆ 30 ವರ್ಷ: ‘ಮಣ್ಣಿನ ಮಗ’ನ ಐತಿಹಾಸಿಕ ಸಾಧನೆಗೆ ಮೂರು ದಶಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ!
KARNATAKA

ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ!

By ಸುರೇಶ್‌

ಬೆಂಗಳೂರು: ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳ ನಿರಂತರ ಹೆಚ್ಚಳದಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಉದ್ಯಮಗಳಲ್ಲಿ ಬಳಸಲಾಗುವ ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರಕಟಿಸಿರುವ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ ಎಂದು ತಿಳಿದುಬಂದಿದೆ.

ದೇಶದ ಪ್ರಮುಖ ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇದರ ಬಿಸಿ ಜೋರಾಗಿಯೇ ತಟ್ಟಿದೆ. ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿದ್ದು, ಇದರೊಂದಿಗೆ ಪ್ರತಿ ಸಿಲಿಂಡರ್ ಬೆಲೆ ಭೀಕರ 3,198 ರೂ.ಗಳಿಗೆ ತಲುಪಿದೆ. ಈ ದಿಢೀರ್ ದರ ಹೆಚ್ಚಳವು ನಗರದ ಹೋಟೆಲ್ ಮಾಲೀಕರು ಹಾಗೂ ಸಣ್ಣ ಉದ್ಯಮಿಗಳಲ್ಲಿ ಆತಂಕ ಮೂಡಿಸಿದೆ.

ರಾಜಧಾನಿ ದೆಹಲಿಯಲ್ಲೂ ಸಹ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ದರವು 42 ರೂ. ಹೆಚ್ಚಾಗಿದ್ದು, ಅಲ್ಲಿನ ಗ್ರಾಹಕರು ಇನ್ಮುಂದೆ ಪ್ರತಿ ಸಿಲಿಂಡರ್‌ಗೆ 3,113.5 ರೂ. ಪಾವತಿಸಬೇಕಾಗುತ್ತದೆ. ಇನ್ನು ದೇಶದ ಮತ್ತೊಂದು ಪ್ರಮುಖ ನಗರವಾದ ಕೋಲ್ಕತ್ತಾದಲ್ಲಿ ಅತ್ಯಂತ ಗರಿಷ್ಠ ಪ್ರಮಾಣದ ಏರಿಕೆ ದಾಖಲಾಗಿದ್ದು, ಅಲ್ಲಿ ಬರೋಬ್ಬರಿ 53.5 ರೂ. ಹೆಚ್ಚಳದೊಂದಿಗೆ ಸಿಲಿಂಡರ್ ಬೆಲೆ 3,255.5 ರೂ.ಗೆ ಏರಿಕೆಯಾಗಿದೆ.

ಕೇವಲ ದೊಡ್ಡ ಸಿಲಿಂಡರ್‌ಗಳು ಮಾತ್ರವಲ್ಲದೆ, ಸಣ್ಣ ಪ್ರಮಾಣದ ವ್ಯಾಪಾರಿಗಳಿಗೆ ನೆರವಾಗುತ್ತಿದ್ದ 5 ಕೆಜಿಯ ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ಗಳ ಮೇಲಿನ ಬೆಲೆಯನ್ನು ಸಹ ಹೆಚ್ಚಿಸಲಾಗಿದೆ. ಈ ಸಣ್ಣ ಸಿಲಿಂಡರ್‌ಗಳ ಬೆಲೆಯಲ್ಲಿ 11 ರೂ. ಏರಿಕೆ ಮಾಡಲಾಗಿದ್ದು, ಇದರ ಪರಿಣಾಮವಾಗಿ ಪ್ರತಿ 5 ಕೆಜಿ ಸಿಲಿಂಡರ್ ಬೆಲೆ ಈಗ 821.5 ರೂ.ಗಳಿಗೆ ಬಂದು ತಲುಪಿದೆ. ಇದು ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ಪ್ರಮಾಣದ ಕ್ಯಾಟರಿಂಗ್ ವ್ಯವಹಾರ ಮಾಡುವವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ದರ ಏರಿಕೆಯು ಕೇವಲ ಉದ್ಯಮಿಗಳಿಗೆ ಮಾತ್ರವಲ್ಲದೆ ಪರೋಕ್ಷವಾಗಿ ಸಾಮಾನ್ಯ ಜನರ ಜೇಬಿಗೂ ಕತ್ತರಿ ಹಾಕಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ಹೋಟೆಲ್‌ಗಳಲ್ಲಿ ತಿಂಡಿ, ತಿನಿಸುಗಳು ಹಾಗೂ ಕಾಫಿ-ಟೀ ಬೆಲೆಗಳು ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಈ ಹೊಸ ಬೆಲೆ ಏರಿಕೆಯು ಗೃಹಬಳಕೆಯ ಬಜೆಟ್ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

1 Min Read

ದೇವೇಗೌಡರು ದೇಶದ ಪ್ರಧಾನಿಯಾಗಿ ಇಂದಿಗೆ 30 ವರ್ಷ: ‘ಮಣ್ಣಿನ ಮಗ’ನ ಐತಿಹಾಸಿಕ ಸಾಧನೆಗೆ ಮೂರು ದಶಕ!

2 Mins Read

ನಿಮ್ಮ ಪತ್ನಿಯವರನ್ನ ರಾಜ್ಯಸಭೆಗೆ ಕಳುಹಿಸಿ : ಸಿದ್ದರಾಮಯ್ಯಗೆ ತೀವ್ರ ಒತ್ತಡ ಹೇರಿದ್ಧ ರಾಹುಲ್ ಗಾಂಧಿ!

1 Min Read
Recent News

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ!

ದೇವೇಗೌಡರು ದೇಶದ ಪ್ರಧಾನಿಯಾಗಿ ಇಂದಿಗೆ 30 ವರ್ಷ: ‘ಮಣ್ಣಿನ ಮಗ’ನ ಐತಿಹಾಸಿಕ ಸಾಧನೆಗೆ ಮೂರು ದಶಕ!

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | New Rules from June 1

State News
KARNATAKA

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow57 KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ರಾಜ್ಯದ ಸರ್ಕಾರಿ ಹಾಗೂ ಇತರೆ ಶಾಲೆಗಳಲ್ಲಿ 1ನೇ ತರಗತಿಯ ದಾಖಲಾತಿ ಪ್ರಕ್ರಿಯೆ…

ಬೆಂಗಳೂರಿನ ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ!

ದೇವೇಗೌಡರು ದೇಶದ ಪ್ರಧಾನಿಯಾಗಿ ಇಂದಿಗೆ 30 ವರ್ಷ: ‘ಮಣ್ಣಿನ ಮಗ’ನ ಐತಿಹಾಸಿಕ ಸಾಧನೆಗೆ ಮೂರು ದಶಕ!

ನಿಮ್ಮ ಪತ್ನಿಯವರನ್ನ ರಾಜ್ಯಸಭೆಗೆ ಕಳುಹಿಸಿ : ಸಿದ್ದರಾಮಯ್ಯಗೆ ತೀವ್ರ ಒತ್ತಡ ಹೇರಿದ್ಧ ರಾಹುಲ್ ಗಾಂಧಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.