ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್‌: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದು, ಕೂಡಲೇ ಅವರ ಬಂಧನಕ್ಕೆ ಅವಕಾಶ ಮಾಡಿಕೊಡಬೇಕಾಗಿ ಆಗ್ರಹಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂತ ಇಲಾಖೆಯು ಪ್ರಜ್ವಲ್ ರೇವಣ್ ಅವರ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ. ಎಸ್‌ಐಟಿಯಿಂದ ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್‌ಪೋರ್ಟ್‌ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.