ಬೆಂಗಳೂರು : ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬುದರ ಕುರಿತಂತೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬುದು ವದಂತಿಯಾಗಿದೆ ಎಂದು ತಿಳಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗಿದ್ದು, ಇಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೭ ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬ ವದಂತಿ ಹಬ್ಬಿದೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ರೇಷನ್ ಕಾರಡ್ಡ ನಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಸದ್ಯ ಆರೋಗ್ಯ ಸೌಲಭ್ಯಕ್ಕಾಗಿ ಮಾತ್ರ ಅವಶ್ಯಕತೆ ಇದ್ದವರಿಗೆ ಬಿಪಿಎಲ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.