Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

07/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್: 15,000 ಪ್ರೋತ್ಸಾಹಧನ ಸಾಧ್ಯವಿಲ್ಲವೆಂದ ರಾಜ್ಯ ಸರ್ಕಾರ | Asha Worker
KARNATAKA

BIG NEWS: ‘ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್: 15,000 ಪ್ರೋತ್ಸಾಹಧನ ಸಾಧ್ಯವಿಲ್ಲವೆಂದ ರಾಜ್ಯ ಸರ್ಕಾರ | Asha Worker

By kannadanewsnow0906/01/2025 7:46 AM

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ.

ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಬಹುತೇಕ ಚಟುವಟಿಕೆಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮೇಲ್ವಿಚಾರಣೆ ಮಾಡಲು ಅನುವಾಗುವಂತೆ ಡಿಜಿಟಲೀಕರಣಗೊಳಿಸಲಾಗಿರುತ್ತದೆ. ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯ ಹಿನ್ನಲೆಯಲ್ಲಿ ಎಲ್ಲಾ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಕೇವಲ 2-3 ಚಟುವಟಿಕೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಶಾ ಕಾರ್ಯಕರ್ತೆಯರು ನಿರ್ವಹಿಸಬೇಕಾಗಿರುತ್ತದೆ. ಮೊಬೈಲ್ ಪೋನ್ ಬಳಕೆಗೆ ಪ್ರತ್ಯೇಕವಾಗಿ ಮಾಸಿಕ ರೂ.280 ಗಳನ್ನು ಪಾವತಿ ಮಾಡಲಾಗುತ್ತದೆ ಎಂಬ ಅಂಶವನ್ನು ತಿಳಿಯಪಡಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM2 Mins Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

07/03/2026 9:49 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

By kannadanewsnow0907/03/2026 9:37 PM KARNATAKA 1 Min Read

ಚಳ್ಳಕೆರೆ : ಸ್ಥಳೀಯ ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ಸ್ಮರಣ ಸಂಚಿಕೆ (ವಾರ್ಷಿಕ ಪತ್ರಿಕೆ) ಯನ್ನು ಗೌರವಾನ್ವಿತ ಸಂಸದರಾದ ಗೋವಿಂದ ಕಾರಜೋಳ್…

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

07/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.