Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BIG BREAKING NEWS: Mild tremors felt again in Kodagu's Sampaje

ಪೆಸಿಫಿಕ್-ಅಂಟಾರ್ಕ್ಟಿಕ್ ರಿಡ್ಜ್ನಲ್ಲಿ 6.4 ತೀವ್ರತೆಯ ಭೂಕಂಪ | Earthquake

03/08/2025 1:22 PM

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

03/08/2025 1:20 PM

BREAKING: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ : ಶಂಕಿತ ಆರೋಪಿ ಅರೆಸ್ಟ್.!

03/08/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ
KARNATAKA

ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ

By kannadanewsnow0926/10/2024 5:06 PM

ಬೆಂಗಳೂರು: “ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಾಗೂ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆಯಾಯಿತು ಎಂದು ಕೇಳಿದಾಗ, “ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಜತೆಗೆ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ. ಕೂಡಲೇ ಇಂತಹ ಆಸ್ತಿಗಳ ನೋಂದಣಿ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಈ ವಿಚಾರದಲ್ಲಿ ನಾವು ಪ್ರಮುಖ ತೀರ್ಮಾನ ಕೈಗೊಂಡಿದ್ದೇವೆ”ಎಂದು ವಿವರಿಸಿದರು.

ಮಳೆಯಿಂದ ಆಗಿರುವ ತೊಂದರೆ ಬಗ್ಗೆ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಬೆಂಗಳೂರು ನಗರದಲ್ಲಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿದ್ದು ಹಾಗೂ ಕಳಪೆ ಗುಣಮಟ್ಟದ ಕಟ್ಟಡ ಕುಸಿತ ಹೊರತಾಗಿ ಮಳೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ” ಎಂದು ತಿಳಿಸಿದರು.

“ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿ, ಅವರನ್ನು ಸುರಕ್ಷಿತವಾಗಿ ಹೋಟೆಲ್ ಗಳಲ್ಲಿ ಇರಿಸಿ ಅವರಿಗೆ ಊಟ ಸೇರಿದಂತೆ ಎಲ್ಲಾ ವ್ಯವಸ್ಥೆ ನೀಡಿದ್ದೇವೆ. ನಮ್ಮ ಅಧಿಕಾರಿಗಳು ದಿನದ 24 ತಾಸುಗಳು ಕೆಲಸ ಮಾಡಿದ್ದಾರೆ” ಎಂದು ಹೇಳಿದರು.

ಮಳೆಯಿಂದ ಆಗುವ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರವೇನು ಎಂದು ಕೇಳಿದಾಗ, “ಒಂದೇ ಬಾರಿಗೆ ಮಳೆನೀರುಗಾಲುವೆ ನಿರ್ಮಾಣ ಮಾಡುತ್ತಿದ್ದೇವೆ. ಹೀಗಾಗಿ ರಾಜಕಾಲುವೆ ಅಕ್ಕಪಕ್ಕ 50 ಅಡಿ ಜಾಗ ಬಿಟ್ಟು ಅಲ್ಲಿ ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಈ ರಸ್ತೆ ನಿರ್ಮಾಣದಿಂದ ಕಟ್ಟಡಗಳಿಗೂ ರಕ್ಷಣೆ ಸಿಗುತ್ತದೆ ಹಾಗೂ ಕಾಲುವೆಗಳ ಸ್ವಚ್ಛ ಕಾರ್ಯಕ್ಕೂ ನೆರವಾಗಲಿದೆ. ಮೊದಲ ಹಂತದಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಯಾವ ಸೂಚನೆ ನೀಡಲಾಗಿದೆ ಎಂದು ಕೇಳಿದಾಗ, “ಎಲ್ಲೆಲ್ಲಿ ರೈತರ ಬೆಳೆಗಳಿಗೆ ಹಾನಿಯಾಗಿವೆ ಅವರಿಗೆ ಪರಿಹಾರ ನೀಡಲು ಸೂಚಿಸಲಾಗಿದೆ” ಎಂದು ತಿಳಿಸಿದರು.

ರೈತರ ಜಮೀನನ್ನು ವಕ್ಫ್ ಮಂಡಳಿ ಮೂಲಕ ವಶಪಡಿಸಿಕೊಂಡು ಓಲೈಕೆ ರಾಜಕಾರಣ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಬೆಂಗಳೂರು ಜನತೆ ಗಮನಕ್ಕೆ: ಅ.28ರಂದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

ಈಗ ಕರ್ನಾಟಕದಲ್ಲಿ ‘ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳ: ಹೀಗೆ ‘ಆನ್ ಲೈನ್’ ಮೂಲಕ ಅರ್ಜಿ ಸಲ್ಲಿಸಿ | Ration Card

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

03/08/2025 1:20 PM2 Mins Read

BREAKING : ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

03/08/2025 1:04 PM1 Min Read

BREAKING : ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ `ಮಜರ್’ ಪತ್ತೆ.!

03/08/2025 12:31 PM1 Min Read
Recent News
BIG BREAKING NEWS: Mild tremors felt again in Kodagu's Sampaje

ಪೆಸಿಫಿಕ್-ಅಂಟಾರ್ಕ್ಟಿಕ್ ರಿಡ್ಜ್ನಲ್ಲಿ 6.4 ತೀವ್ರತೆಯ ಭೂಕಂಪ | Earthquake

03/08/2025 1:22 PM

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

03/08/2025 1:20 PM

BREAKING: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ : ಶಂಕಿತ ಆರೋಪಿ ಅರೆಸ್ಟ್.!

03/08/2025 1:12 PM

Shocking: ಪಾಸ್‌ಪೋರ್ಟ್‌ ಅವಧಿ ಮುಗಿದಿದೆಯೆಂದು ವಿಮಾನ ನಿಲ್ದಾಣದಲ್ಲೇ 10 ವರ್ಷದ ಮಗನನ್ನು ಬಿಟ್ಟು ಹೋದ ದಂಪತಿ

03/08/2025 1:10 PM
State News
KARNATAKA

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

By kannadanewsnow5703/08/2025 1:20 PM KARNATAKA 2 Mins Read

ಬೆಂಗಳೂರು : ಬೆಳಗಾವಿಯಲ್ಲಿ ಮುಸ್ಲಿಂ ಮುಖ್ಯ ಶಿಕ್ಷಕನನ್ನು ವರ್ಗಾವಣೆ ಮಾಡಿಸಬೇಕೆಂದು ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮಸೇನೆ…

BREAKING : ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

03/08/2025 1:04 PM

BREAKING : ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ `ಮಜರ್’ ಪತ್ತೆ.!

03/08/2025 12:31 PM

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

03/08/2025 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.