Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ’ ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!
KARNATAKA

ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ’ ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!

By kannadanewsnow5711/12/2024 6:06 PM

ಬೆಳಗಾವಿ : ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Big shock to 'illegal ration card holders' by state government: Special drive to take legal action ರಾಜ್ಯ ಸರ್ಕಾರದಿಂದ `ಅಕ್ರಮ ಪಡಿತರ ಚೀಟಿದಾರರಿಗೆ' ಬಿಗ್ ಶಾಕ್ : ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ.!
Share. Facebook Twitter LinkedIn WhatsApp Email

Related Posts

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM2 Mins Read

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM1 Min Read

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM1 Min Read
Recent News

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM
State News
KARNATAKA

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

By kannadanewsnow0922/12/2025 9:55 PM KARNATAKA 2 Mins Read

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ…

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.