Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ
KARNATAKA

BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ

By kannadanewsnow0909/12/2024 8:54 PM

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು.

ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್‌ ಹುಕುಂ ಯೋಜನೆ ಅಡಿಯಲ್ಲಿ ನಿಜವಾಗಿಯೂ ಭೂ ಮಂಜೂರು ಮಾಡಿರುವವರಿಗೆ ದಾಖಲೆ ಇಲ್ಲದಂತಾಗಿದೆ. ಹೀಗಾಗಿ ಜನವರಿ 01 ರಿಂದ ಎಲ್ಲಾ ತಾಲೂಕು ಕಚೇರಿಯಲ್ಲಿ ಭೂ-ಮಂಜೂರಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸುವ ಯೋಜನೆ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಅಲ್ಲದೆ, “ಭೂ ಮಂಜೂರಾತಿ ದಾಖಲೆಗಳನ್ನು ಡಿಜಿಟಲೀಕರಿಸುವಾಗ ಹಲವು ರೈತರಿಗೆ ಸಂಬಂಧಿಸಿದ ಹಳೆಯ ದಾಖಲೆಗಳೂ ಲಭ್ಯವಾಗಲಿವೆ. ಇವುಗಳ ಆಧಾರದಲ್ಲಿ ಈ ಹಿಂದೆ ಭೂ ಮಂಜೂರಾಗಿಯೂ ಸಾಗುವಳಿ ಚೀಟಿ ಹಾಗೂ ಖಾತೆ ಪಡೆಯದ ರೈತರಿಗೆ ಸೂಕ್ತ ದಾಖಲೆಗಳನ್ನು ಒದಗಿಸಬಹುದು. ಅಲ್ಲದೆ, ಮುಂದಿನ ದಿನಗಳಲ್ಲಿ ದಾಖಲೆಗಳನ್ನು ತಿದ್ದುವ ಹಾಗೂ ಬಚ್ಚಿಡುವ ಮೂಲಕ ರೈತರನ್ನು ಶೋಷಣೆಗೆ ಒಳಪಡಿಸುವಂತಹ ಕೆಲಸಗಳಿಗೆ ಶಾಶ್ವತ ಪರಿಹಾರವಾಗಲಿದೆ” ಎಂದು ಸದನಕ್ಕೆ ಅವರು ಭರವಸೆ ನೀಡಿದರು.

ಇದೇ ವೇಳೆ ಬಗರ್ ಹುಕುಂ ಯೋಜನೆ ಅಡಿಯಲ್ಲಿ ಗೋಮಾಳ ಜಮೀನು ಮಂಜೂರಾತಿ ವಿಚಾರದಲ್ಲಿನ ಕಾನೂನು ತೊಡಕಿನ ಬಗ್ಗೆಯೂ ಸದಕ್ಕೆ ಮಾಹಿತಿ ನೀಡಿದ ಸಚಿವರು, “ಗೋಮಾಳ ಜಮೀನಿನ ಮಂಜೂರಾತಿಗೆ ಸಂಬಂಧಿಸಿ ಹಿಂದಿನಿಂದಲೂ ಅನುಸರಿಸುತ್ತಾ ಬಂದಿರುವ ಕಾನೂನನ್ನೇ ಈಗಲೂ ಅನುಸರಿಸಲಾಗುತ್ತಿದೆ.ಅಲ್ಲದೆ, ಈ ಬಗ್ಗೆ ಸ್ವತಃ ಸುಪ್ರೀಂ ಕೋರ್ಟ್ ಮೂರು ತೀರ್ಪು ನೀಡಿದೆ. ಹೀಗಾಗಿ ಸರ್ಕಾರದ ಭಾಗವಾಗಿ ಸಚಿವನಾಗಿ ನಾನು ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮೀರಲಾಗದು. ಆದರೂ, ರಾಜ್ಯದ ಕಾನೂನಿಗೆ ಬದ್ದನಾಗಿ ಹೆಚ್ಚುವರಿ ಗೋಮಾಳ ಜಮೀನನ್ನು ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ರೈತರಿಗೆ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು. ಅಲ್ಲದೆ, ʼಮಾನ್ಯ ಶಾಸಕರು ದಯವಿಟ್ಟು ಸುಪ್ರೀಂ ಕೋರ್ಟ್ ತೀರ್ಪನ್ನು ಓದಿ ನಂತರ ಈ ಬಗ್ಗೆ ಚರ್ಚಿಸೋಣʼ ಎಂದು ಕಿವಿಮಾತು ಹೇಳಿದರು

ಮುಂದುವರೆದು, “ಪ್ರಸ್ತುತ ರಾಜ್ಯ ಸರ್ಕಾರದ ಬಳಿ ಹೊಸ ಅಂಗನವಾಡಿಗಳ ನಿರ್ಮಾಣಕ್ಕೆ ಜಾಗ ಇಲ್ಲ. 12000 ಸ್ಮಶಾನ ಜಾಗ ಖರೀದಿಗೆ ವರ್ಷಕ್ಕೆ 20 ರಿಂದ 30 ಕೋಟಿ ನೀಡುತ್ತಿದ್ದೇನೆ. ಆಸ್ಪತ್ರೆ ಕಾಲೇಜುಗಳ ನಿರ್ಮಾಣಕ್ಕೂ ಸರ್ಕಾರದ ಬಳಿ ಸ್ವಂತ ಜಾಗವಿಲ್ಲದಂತಾಗಿದೆ. ಸರ್ಕಾರಿ ಜಮೀನಿನ ಜವಾಬ್ದಾರಿ ಕಂದಾಯ ಇಲಾಖೆಗೆ ಕೊಟ್ಟಿದ್ದಾರೆ. ಆದರೆ, ಕಂದಾಯ ಇಲಾಖೆಗೆ ತಾಲೂಕು ಕಚೇರಿ ಕಟ್ಟಲೂ ಜಾಗ ಇಲ್ಲ. ಕೆಲವೆಡೆ ಹೊಸ ತಾಲೂಕು ಕಚೇರಿ ಮಂಜೂರು ಮಾಡಲು ತಾಲೂಕು ಕೇಂದ್ರದಿಂದ 8 ಕಿಮೀ ಹೊರಗೆ ಜಾಗ ತೋರಿಸಿದ್ದಾರೆ. ಹೊಸ ತಾಲೂಕುಗಳಿಗೆ 24 ತಾಲೂಕು ಕಚೇರಿ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಈಗಲೂ 8 ರಿಂದ 10 ತಾಲೂಕುಗಳಲ್ಲಿ ತಾಲೂಕು ಕಚೇರಿ ಕಟ್ಟಲು ಸರ್ಕಾರಿ ಜಾಗಗಳೇ ಇಲ್ಲ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಬೇಸರ ವ್ಯಕ್ತಪಡಿಸಿದರು.

ಬಗರ್ ಹುಕುಂ ಅರ್ಜಿ ತಿರಸ್ಕೃತಕ್ಕೆ ಕಾರಣಗಳೇನು?

ಸದನಕ್ಕೆ ರಾಜ್ಯಾದ್ಯಂತ ಬಗರ್ ಹುಕುಂ ಅರ್ಜಿಗಳ ತಿರಸ್ಕೃತಕ್ಕೆ ಕಾರಣವೇನು? ಎಂಬ ಕುರಿತು ಸದನಕ್ಕೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ” ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಎಕರೆ ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ.

ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಬಿವೈ ವಿಜಯೇಂದ್ರ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

18/03/2026 8:57 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.