Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `Amazon Prime’ ಬಳಕೆದಾರರಿಗೆ ಶಾಕ್ : ಜೂನ್ 17 ರಿಂದ `ಜಾಹೀರಾತು’ ಮುಕ್ತ ಕಾರ್ಯಕ್ರಮಗಳನ್ನು ವೀಕ್ಷಿಸಲು ಹೆಚ್ಚುವರಿ ಹಣ ಪಾವತಿ.!

14/05/2025 11:08 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 523 ಅಂಕ ಏರಿಕೆ, 24,700 ರ ಗಡಿ ದಾಟಿದ ‘ನಿಫ್ಟಿ’ |Share Market

14/05/2025 10:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್
KARNATAKA

‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್

By kannadanewsnow0907/11/2024 6:08 PM

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ.

ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾರಿ ಜಮೀನಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಪರಿಹಾರದ ಮೊತ್ತವನ್ನು ಪಾವತಿಸಿರುವ ಆರೋಪ ಕೇಳಿಬಂದಿದೆ. ಈ ಹಗರಣದಲ್ಲಿ KIADB ಭೂಸ್ವಾಧೀನಾಧಿಕಾರಿಯಾಗಿರುವ KAS ಅಧಿಕಾರಿ ಬಾಳಪ್ಪ ಹಂದಿಗುಂದ ಅವರು ಅಧಿಕಾರ ದುರುಪಯೋಗಪಡಿಸಿದ್ದಾರೆ ಎಂದು ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಈ ದೂರು ಸಲ್ಲಿಸಿದ್ದಾರೆ.

KIADB ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪ ನೂರಾರು ಎಕ್ರೆ ಜಮೀನನ್ನು ಕೈಗಾರಿಕಾ ಉದ್ದೇಶಗಳಿಗಾಗಿ ವಶಪಡಿಸಿಕೊಳ್ಳಲು ನೋಟಿಫಿಕೇಶನ್ ಹೊರಡಿಸಲಾಗಿತ್ತು. ಈ ಪೈಕಿ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲಿ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ. ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದ ಸರ್ವೇ ನಂಬರ್ 7ರಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿದ್ದ ಹಲವರಿಗೆ 1984ರಲ್ಲಿ ಆಗಿನ ತಹಸೀಲ್ದಾರರು ‘ಎವಿಕ್ಷನ್ ನೋಟಿಸ್’ ಜಾರಿ ಮಾಡಿದ್ದರು. ಅನಂತರ ಸದರಿ ಜಮೀನನ್ನು ‘ಸರ್ಕಾರಿ ಫಡಾ’ ಎಂದು ಘೋಷಿಸಲಾಗಿತ್ತು. ಆದರೆ, ಕೆಐಎಡಿಬಿ ವತಿಯಿಂದ ಭೂಸ್ವಾಧೀನ ಪ್ರಸ್ತಾಪವಾದ ಸಂದರ್ಭದಲ್ಲಿ ಹಲವರನ್ನು ಜಮೀನು ಮಾಲೀಕರೆಂದು ಗುರುತಿಸಿ ಪರಿಹಾರ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. 27.07.202 ರಂದು ಬಾಳಪ್ಪ ಹಂದಿಗುಂದ (ವಿಶೇಷ ಭೂಸ್ವಾಧೀನಾಧಿಕಾರಿ-2) ಅವರ ಉಪಸ್ಥಿತಿಯಲ್ಲಿ ನಡೆದ ತೀರ್ಮಾನ ಹಾಗೂ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು EDಗೆ ಸಲ್ಲಿಸಲಾಗಿರುವ ದೂರಿನಲ್ಲಿ ಗಮನಸೆಳೆಯಲಾಗಿದೆ.

ಈ ಸಂಬಂಧ ತನಿಖೆಗೆ ಕೋರಿ 12.09.2024ರಂದು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ, ಕೈಗಾರಿಕಾ ಸಚಿವರಿಗೆ ದೂರು ನೀಡಲಾಗಿತ್ತು. ಇದಕ್ಕೆ ಸ್ಪಂಧಿಸದಿದ್ದಾಗ 09.10.2024ರಂದು ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಅದಕ್ಕೂ ಸರ್ಕಾರ ಸ್ಪಂಧಿಸದ ಹಿನ್ನೆಲೆ ಅಕ್ಟೊಬರ್ 23ರಂದು EDಗೆ ಅಹವಾಲು ಸಲ್ಲಿಸಲಾಗಿದ್ದು, ಬುಧವಾರ (06.11.2024) ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ ದೂರು ಸಲ್ಲಿಸಿ ಬಹುಕೋಟಿ KIADB ಹಗರಣ ಬಗ್ಗೆ ಸಮಗ್ರ ತನಿಖೆ ನಡೆಸಲು ಕೆ.ಎ.ಪಾಲ್ ಮನವಿ ಮಾಡಿದ್ದಾರೆ.

ದೇವನಹಳ್ಳಿಯ ಗೊಲ್ಲಹಳ್ಳಿ, ದೊಡ್ಡಗೊಲ್ಲಹಳ್ಳಿ, ಜೋಡಿಗ್ರಾಮ, ಕುಂದಾಣ, ಚಪ್ಪರದಹಳ್ಳಿ, ಕೋಡಿಹಳ್ಳಿ ಕೋಣಗಟ್ಟಿ, ಬೈದೇನಹಳ್ಳಿ, ಹಾರೋನಹಳ್ಳಿ, ಹರಳೂರು, ಮೊದಲಾದ ಹತ್ತಾರು ಹಳ್ಳಿಗಳಲ್ಲಿ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಿ ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ. ಸರ್ಕಾರದ ಭೂಮಿಯನ್ನು ಸ್ವಾಧೀನ ಪಡೆದು ನಕಲಿ ವ್ಯಕ್ತಿಗಳಿಗೆ ಪರಿಹಾರ ಪಾವತಿಸಲಾಗಿದೆ. ಚಪ್ಪರದಹಳ್ಳಿ ಗ್ರಾಮದ ಸರ್ವೇ ನಂಬರ್ 7ರಲ್ಲಿ 45 ಎಕರೆ 15 ಗುಂಟೆ ಪೈಕಿ 5.5 ಎಕರೆ ಜಮೀನನ್ನು ಹಂಗಾಮಿ ಸಾಗುವಳಿ ಭೂಮಿಯೇ ಎಂದು ಪರಿಶೀಲಿಸದೆ ಹಲವರ ಹೆಸರಿನಲ್ಲಿ ಪರಿಹಾರ ಪ್ರಕಟಿಸಲಾಗಿದೆ. 38.5 ಎಕರೆ ಹಂಗಾಮಿ ಸಾಗುವಳಿ ಜಾಮೀನು ‘ಸರ್ಕಾರಿ ಫಡಾ’ ಎಂದು ತಿಳಿದಿದ್ದರೂ ಅಕ್ರಮವಾಗಿ ಪರಿಹಾರದ ಮೊತ್ತ ಪಾವತಿಯಾಗಿದೆ ಎಂದು ಈ ದೂರಿನಲ್ಲಿ ಗುರುತರ ಆರೋಪ ಮಾಡಲಾಗಿದೆ.

ಬಾಳಪ್ಪ ಹಂದಿಗುಂದ ವಿರುದ್ದದ ಇತರ ಪ್ರಕರಣಗಳ ಬಗ್ಗೆಯೂ ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಳಪ್ಪ ಹಂದಿಗುಂದ ರವರು 2020ರಲ್ಲಿ ಬೇರೆ ಇಲಾಖೆಯ ಹೆಚ್ಚವರಿ ಅಧಿಕಾರಿಗಳಾಗಿರುವಾಗ ಸಾದಳ್ಳಿ ಗ್ರಾಮದ ರೈತರಿಗೆ 83 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿ ಗೋಲ್ ಮಾಲ್ ಮಾಡಿರುವ ಆರೋಪವೂ ಇದೆ. ಒಂದೇ ಜಮೀನಿಗೆ ಎರಡೆರಡು ಬಾರಿ ಪರಿಹಾರದ ಹಣ ಪಾವತಿಸಿರುವ ಅಕ್ರಮವೂ ನಡೆದಿದೆ. ಕೆಲವು ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ.

ದೇವನಹಳ್ಳಿ ತಾಲೂಕಿನ ಬೈದೇನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ, ಹರೋನಹಳ್ಳಿ ಮೊದಲಾದ ಗ್ರಾಮಗಳಲ್ಲಿ ಕೆಐಎಡಿಬಿ ಭೂಸ್ವಾಧೀನ ನಡೆಸಿದ್ದು, ಭೂಮಿಯ ಮಾಲೀಕರಿಗೆ ಪ್ರತೀ ಎಕರೆಗೆ 1.35 ಕೋಟಿ ರೂಪಾಯಿ ಪಾವತಿಸಿ, ಆ ಮೊತ್ತದಿಂದ ಕಮೀಷನ್ ಸಂಗ್ರಹಿಸಲಾಗಿದೆ ಎಂಬ ರೈತರು ‘ಸಿಟಿಜನ್ ರೈಟ್ಸ್ ಫೌಂಡೇಷನ್’ಗೆ ದೂರು ನೀಡಿದ್ದು, ಮುಖ್ಯಮತ್ರಿ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್ ರವರಿಗೆ ತಲುಪಿಸಲು ಪ್ರತೀ ಎಕರೆಗೆ 35 ಲಕ್ಷ ರೂಪಾಯಿ ಕಮೀಷನ್ ಸಂಗ್ರಹಿಸಲಾಗಿದೆ ಎಂದೂ ಆರೋಪಿಸಿದ್ದಾರೆ. ಅನೇಕ ಭೂ ಮಾಲೀಕರಿಗೆ ಹಣ ನೀಡುವ ಬದಲು 50:50 ಅನುಪಾತದಲ್ಲಿ ನಿವೇಶನ ಪಡೆಯುವ ಒಪ್ಪಂದ ಮಾಡಿಸಿ, ಆ ಜಮೀನನ್ನು ತಮ್ಮ ಬೇನಾಮಿ ವ್ಯಕ್ತಿಗಳಿಗೆ ಸೇಲ್ ಅಗ್ರಿಮೆಂಟ್ ಮಾಡಿಸಲಾಗಿದೆ ಎಂದೂ ಈ ದೂರಿನಲ್ಲಿ ಆರೋಪಿಸಲಾಗಿದೆ.

ಬಾಳಪ್ಪ ಹಂದಿಗುಂದ ಒಬ್ಬ ಪ್ರಭಾವಿ ಅಧಿಕಾರಿಯಾಗಿದ್ದು, ಅವ್ಯವಹಾರ ಪ್ರಕರಣದಲ್ಲಿ ಅಮಾನತಾಗಿದ್ದರೂ ಅದೇ ಇಲಾಖೆಯ ಹುದ್ದೆಯಲ್ಲಿ ಮುಂದುವರಿಯುವಷ್ಟು ಪ್ರಭಾವಿ. ಲೋಕಾಯುಕ್ತ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿದ್ದರೂ ಕೆಐಎಡಿಬಿಯಲ್ಲೇ ಮುಂದುವರಿಸಲು ಸಚಿವ ಎಂಬಿ ಪಾಟೀಲ್ ಶಿಫಾರಸು ಮಾಡಿದ್ದು, ಸಿಎಂ ಅದಕ್ಕೆ ಒಪ್ಪಿರುವ ಕ್ರಮವೂ ಆಕ್ಷೇಪಾರ್ಹ ಎಂದು ದೂರುದಾರ ಕೆ.ಎ.ಪಾಲ್ ಅವರು ಈ ದೂರಿನಲ್ಲಿ ಹೇಳಿದ್ದಾರೆ.

ಈ ನಡುವೆ ಕೆಐಎಡಿಬಿ ವತಿಯಿಂದ ನಡೆದಿದೆ ಎನ್ನಲಾಗಿರುವ ಅಕ್ರಮಗಳ ವಿರುದ್ಧ ‘ರೈತ ಹೋರಾಟ ಸಮಿತಿ’ ನೇತೃತ್ವದಲ್ಲಿ ಕಳೆದ 6-7 ತಿಂಗಳುಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಸಮಸ್ಯೆ ಬಗೆಹರಿಸದೆ ಇರುವುದರಿಂದ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಿಸಬೇಕೆಂದು ಕೆ.ಎ.ಪಾಲ್ ಆಗ್ರಹಿಸಿದ್ದಾರೆ.

ಬೆಂಗಳೂರು ಜನತೆ ಗಮನಕ್ಕೆ: ಇಂದಿರಾನಗರದಲ್ಲಿ ‘ರಾಮೇಶ್ವರಂ ಕೆಫೆ’ಯ ನೂತನ ಶಾಖೆ ಆರಂಭ

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM1 Min Read

BIG NEWS : ನಾಳೆ DCM `ಡಿ.ಕೆ. ಶಿವಕುಮಾರ್’ ಜನ್ಮದಿನ : ಅಭಿಮಾನಿಗಳಿಗೆ ವಿಶೇಷ ಮನವಿ.!

14/05/2025 10:14 AM1 Min Read

ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!

14/05/2025 10:09 AM3 Mins Read
Recent News

BIG NEWS : `Amazon Prime’ ಬಳಕೆದಾರರಿಗೆ ಶಾಕ್ : ಜೂನ್ 17 ರಿಂದ `ಜಾಹೀರಾತು’ ಮುಕ್ತ ಕಾರ್ಯಕ್ರಮಗಳನ್ನು ವೀಕ್ಷಿಸಲು ಹೆಚ್ಚುವರಿ ಹಣ ಪಾವತಿ.!

14/05/2025 11:08 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 523 ಅಂಕ ಏರಿಕೆ, 24,700 ರ ಗಡಿ ದಾಟಿದ ‘ನಿಫ್ಟಿ’ |Share Market

14/05/2025 10:53 AM

ಆಪರೇಷನ್ ಸಿಂಧೂರ್ ನಂತರ ‘ಆಪರೇಷನ್ ಕೆಲ್ಲರ್’ ಪ್ರಾರಂಭಿಸಿದ ಭಾರತೀಯ ಸೇನೆ | Operation Keller

14/05/2025 10:50 AM
State News
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

By kannadanewsnow5714/05/2025 11:00 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಅಮೃತಹಳ್ಳಿ…

BIG NEWS : ನಾಳೆ DCM `ಡಿ.ಕೆ. ಶಿವಕುಮಾರ್’ ಜನ್ಮದಿನ : ಅಭಿಮಾನಿಗಳಿಗೆ ವಿಶೇಷ ಮನವಿ.!

14/05/2025 10:14 AM

ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!

14/05/2025 10:09 AM

ಅನುಮೋದನೆಗಾಗಿ 6 ಮಸೂದೆಗಳು ಮತ್ತೊಮ್ಮೆ ರಾಜ್ಯಪಾಲರಿಗೆ ರವಾನೆ: ರಾಜ್ಯ ಸರ್ಕಾರ

14/05/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.