ಬೆಂಗಳೂರು : ಬೆಂಗಳೂರಿನಲ್ಲಿ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಶಿವರುದ್ರಯ್ಯ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.
ವಿಜಯನಗರದಲ್ಲಿ ಬೃಹತ್ ಮರ ಧರೆಗೆ ಉರುಳಿ ಬಿದ್ದಿದೆ. ಈ ವೇಳೆ ಆಟೋ ಒಂದು ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಚಾಲಕ, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲಿಯೇ ಆಟೋ ಚಾಲಕ ಶಿವರುದ್ರಯ್ಯ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಕಳೆದ ಆಗಸ್ಟ್ 13 ರಂದು ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿ 6 ಮಂದಿ ಗಾಯಗೊಂಡಿದ್ದರು.ಘಟನೆಯಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿತ್ತು. ಓರ್ವ ವ್ಯಕ್ತಿಯ ಎದೆಗೆ ಪೆಟ್ಟಾಗಿದ್ದು ಬೆನ್ನುಮೂಳೆ ಮುರಿದಿದೆ. ಈ ವೇಳೆ ಗಾಯಳುಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.