ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ಆರೋಪಿ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಆತನ ಡೆತ್ ನೋಟ್ ಪತ್ತೆಯಾಗಿದ್ದು, ಸ್ಪೋಟಕ ರಹಸ್ಯ ಬಯಲಾಗಿದೆ.
ಹೌದು, ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂದಿಸಲು ಬೆಂಗಳೂರಿನಿಂದ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಆತ್ಮಹತ್ಯೆಗೆ ಮುನ್ನ ಆತ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.
ಹಂತಕನ ಡೆತ್ ನೋಟ್
ಸೆಪ್ಟೆಂಬರ್ 3 ರಂದು ನಾನು ಬೆಂಗಳೂರಿನ ಮಹಾಲಕ್ಷ್ಮಿ ಮನೆಗೆ ಹೋಗಿದ್ದೆ. ವೈಯಕ್ತಿಕವಾಗಿ ಆಕೆ ನನ್ನೊಂದಿಗೆ ಜಗಳ ಮಾಡುತ್ತಿದ್ದಳು. ಹೀಗಾಗಿ ಸೆ.3 ರಂದು ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿದ್ದೇನೆ ಎಂದು ಮುಕ್ತಿ ರಂಜನ್ ರಾಯ್ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.
ಮಹಾಲಕ್ಷ್ಮಿ ನನ್ನ ಮೇಲೆ ಹಲ್ಲೆ ಮಾಡಿದ್ದಳು. ಇದರಿಂದ ಕೋಪಗೊಂಡು ನಾನು ಅವಳನ್ನು ಹತ್ಯೆ ಮಾಡಿದ್ದೇನೆ. ಕೊಲೆ ಮಾಡಿದ ಬಳಿಕ ದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟಿದ್ದೆ. ಆಕೆಯ ವರ್ತನೆಯಿಂದ ಬೇಸೆತ್ತು ಈ ಕೃತ್ಯ ಮಾಡಿದ್ದೇನೆ ಎಂದು ಬರೆದಿದ್ದಾನೆ.