Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ!
FILM

ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ!

By kannadanewsnow0728/03/2024 9:31 AM

ಕೆಎನ್‌ಎನ್‌ಸಿನಿಮಾಡೆಸ್ಕ್‌: ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯವಾಗಿದ್ದು, ಶೀಘ್ರದಲ್ಲಿ ಸಿನಿಮಾ ತೆರೆ ಮೇಲೆ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದೆ.

ಈ ನಡುವೆ ಅದಕ್ಕೂ ಮುನ್ನ ಸಿನಿಮಾ ತಂಡವು ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ.

ಈ ವೇಳೆಯಲ್ಲಿ ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥಾ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದದ್ದು ವಿಶೇಷವಾಗಿತ್ತು.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಅವರೆಲ್ಲರೂ ಸಿನಿಮಾದ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಕೊಳ್ಳುವಂತೆ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವೀಡಿಯೋ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸೋ ವೀಟಿಯನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಲಾಯಿತು.

ನಿರ್ದೇಶಕ ಅರುಣ್ ಅಮುಕ್ತ ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ ಕಶ್ಯಪ್ ಮಾಹಿತಿ ನೀಡಿದರು. ಕುಂಬಳ ಕಾಯಿ ಒಡೆದಾದ ನಂತರದಲ್ಲೀಗ ಬಿರುಸಿನಿಂದ ಪೆÇೀಸ್ಟ್ ಪೆÇ್ರಡಕ್ಷನ್ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ಜೂನ್ ಹೊತ್ತಿಗೆಲ್ಲ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲಿಯೇ ಈ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ರ್ಯಾಪರ್ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳ ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ಚಂದನ್ ಅವರಲ್ಲಿದೆ. ಆ ಬಗ್ಗೆ ಚಿತ್ರತಂಡದಲ್ಲೂ ಒಂದು ಮೆಚ್ಚುಗೆ ಇದ್ದೇ ಇದೆ.

ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Bigg Boss Fame Chandan Shetty Starrer Vidyarthi Vidyarthiniyare Movie Shooting Completed
Share. Facebook Twitter LinkedIn WhatsApp Email

Related Posts

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

06/05/2025 4:33 PM2 Mins Read

ಖ್ಯಾತ ಮಲಯಾಳಂ ನಟ ವಿಷ್ಣು ಪ್ರಸಾದ್ ಇನ್ನಿಲ್ಲ | Actor Vishnu Prasad No More

02/05/2025 3:26 PM1 Min Read

BREAKING : ಸಿಂಧೂ ನೀರನ್ನು ತಡೆದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ

26/04/2025 11:44 AM1 Min Read
Recent News

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.