ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.

Khosta Virus | ಕರೋನ ಬೆನ್ನಲ್ಲೇ ಮತ್ತೊಂದು ಡೆಡ್ಲಿ ವೈರಸ್ ಪತ್ತೆ, ಹೆಚ್ಚಿದ ಆತಂಕ

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.  ವೃಶ್ಚಿಕ ಲಗ್ನದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

Share.
Exit mobile version