ಬೆಂಗಳೂರು : ಮಸ್ ಜಿದ್ ಎ ಅಲ್ ಖುಬ ಎಂಬ ಮಸೀದಿಯನ್ನ ಡೆಮಾಲಿಷನ್ ಮಾಡಲು ಬಿಬಿಎಂಪಿ ಯಿಂದ ನೋಟೀಸ್ ನೀಡಲಾಗಿದೆ ಎನ್ನಲಾಗಿದೆ. ಎರಡು ಸೈಟ್ ಗಳ ಮಧ್ಯೆ ನಿವೇಶನ ಸಂಖ್ಯೆ14 ಕೂಡಾ ಇತ್ತಂತೆ. ಅದನ್ನ ಒತ್ತುವರಿ ಮಾಡ್ಕೊಂಡು ಮಸೀದಿ ನಿರ್ಮಾಣ ಮಾಡಲಾಗಿಗಿದ್ದು, ಸಾರ್ವಜನಿಕರ ಓಡಾಟಕ್ಕೆ ಇದ್ದ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದೆ ಅಂತ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಅಂದ ಹಾಗೇ ಈ ಮಸೀದಿಯು ಬೆಂಗಳೂರು ಜಿಲ್ಲೆಯ ವಿಜಯನಗರದಲ್ಲಿದ್ದು, ಮಸೀದಿ ನಿರ್ಮಾಣ ವೇಳೆಯಲ್ಲಿ, ಐದು ಅಡಿ ಪ್ಯಾಸೇಜ್ ನ ಒತ್ತುವರಿ ಮಾಡ್ಕೊಂಡು ಇರುವ ಹಿನ್ನಲೆಯಲ್ಲಿ ಒತ್ತುವರಿ ಮಾಡಿ ನಿರ್ಮಿಸಿರುವ ಭಾಗವನ್ನ ತೆರವು ಮಾಡಿ ವಶಕ್ಕೆ ಪಡೆಯಲು ಪ್ರಾದೇಶಿಕ ಆಯುಕ್ತರು ಬಿಬಿಎಂಪಿಗೆ ಆದೇಶ ಹೊರಡಿಸಿದ್ದಾರೆ. ಮಸ್ ಜಿದ್ ಎ ಅಲ್ ಒತ್ತುವರಿ ಭಾಗವನ್ನ ತೆರವು ಮಾಡಲು ಮಸ್ ಜಿದ್ ಎ ಅಲ್ ಖುಬ ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟೀಸ್ ಕೊಟ್ಟಿದ್ದು, ನಿವೇಶನ ಸಂಖ್ಯೆ13 ಹಾಗೂ 15 ರಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಅಂತ ಉಲ್ಲೇಖ ಮಾಡಲಾಗಿದೆ.