ದಾವಣಗೆರೆ : ದಾವಣಗೆರೆಯಲ್ಲಿ ನಡೆದ ಭಗವದ್ಗೀತೆ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಶಿಷ್ಟಾಚಾರದ ನೆಪದಲ್ಲಿ ದಲಿತ ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆ ನಡೆದಿದೆ.

BIGG NEWS : ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ? ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದೇನು ಗೊತ್ತಾ?

ದಾವಣಗೆರೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಭಾಗಿಯಾಗಿದ್ದರು. ವೇದಿಕೆ ಮೇಲಿದ್ದ ಮಾಯಕೊಂಡ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪ್ರೊ.ಎನ್. ಲಿಂಗಣ್ಣರನ್ನು ವೇದಿಕೆಯಿಂದ ಸಂಘಟಕರು ಕೆಳಗಿಳಿಸಿದ್ದಾರೆ.

ಶಾಸಕ ಲಿಂಗಣ್ಣ ಅವರು ವೇದಿಕೆ ಹತ್ತಿದ ಕೆಲ ಹೊತ್ತಿನಲ್ಲೇ ಸಂಘಟಕರು ವೇದಿಕೆ ಮೇಲಿಂದ ಕೆಳಗೆ ಇಳಿಸಿದ್ದು, ಸದ್ಯ ಈ ನಡೆ ವ್ಯಾಪಾಕ ಟೀಕೆಗೆ ಗುರಿಯಾಗಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಕಾಗೇರಿ, ವಿವಿಧ ಮಠಾಧೀಶರು ಸೇರಿದಂತೆ ಹಲವರು ಭಾಗಿಯಾಗಿದ್ದರು.

BIG NEWS : ʻಭಾರತ್ ಜೋಡೋ ಯಾತ್ರೆʼಯಲ್ಲಿ ಭಾಗವಹಿಸಿದ ಶಿಕ್ಷಕನಿಗೆ ಅಮಾನತು ಶಿಕ್ಷೆ | Bharat Jodo Yatra

Share.
Exit mobile version