ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ನಡೆದಿದ್ದು, ಈಗಾಗಲೇ ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದು, ಕೊಲೆ ಆರೋಪಿ ಮಹಾಂತೇಶ್ ಐದು ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ಗುರೂಜಿಯನ್ನು ಕೊಲ್ಲುವ ಸುಳಿವು ಕೊಟ್ಟಿದ್ದ ಎಂದು ತಿಳಿದುಬಂದಿದೆ.
SHOCKING NEWS : ಗಣಿ ಜಿಲ್ಲೆಯಲ್ಲಿ ʻ ಘನಘೋರ ʼ ಘಟನೆ ಬೆಳಕಿಗೆ : ಮಹಿಳೆಯ ಪ್ರಾಣ ಹಿಂಡಿದ ʻ ಬುರ್ಖಾ ʼ
ಐದು ದಿನಗಳ ಹಿಂದೆ ಆರೋಪಿ ಮಹಾಂತೇಶ್ ಫೇಸ್ಬುಕ್ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿದ್ದ ಆರೋಪಿ, ‘ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ? ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ’ ಎಂದು ಬರೆದುಕೊಂಡಿದ್ದಾನೆ.
Watch: ಡ್ರಮ್ಸ್ ಬಾರಿಸುವ ಮೂಲಕ ಪತಿ ಸಿಎಂ ಏಕನಾಥ್ ಶಿಂಧೆ ಅವರನ್ನು ಮನೆಗೆ ಸ್ವಾಗತಿಸಿದ ಪತ್ನಿ!
ಸದ್ಯ ಚಂದ್ರಶೇಖರ್ ಗುರೂಜಿ ಮೃತದೇಹ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಇಂದು ಬೆಳಗ್ಗೆ ಮರಣೋತ್ತರ ಪರೀಕ್ಷೆಯ ಬಳಿಕ ಹುಬ್ಬಳಿಯಲ್ಲಿಯೇ ಗುರೂಜಿಯ ಅಂತ್ಯಸಂಸ್ಕಾರ ನಡೆಯಲಿದೆ.
ಹುಬ್ಬಳ್ಳಿಯ ಕೇಶ್ವಾಪುರ ಸಮೀಪದ ಸುಳ್ಯ ರಸ್ತೆಯ ಚಂದ್ರಶೇಖರ್ ಗುರೂಜಿಯ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೇರವೇರಲಿದೆ. ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.