ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಹಂತಕರು ಕೇರಳದವರಲ್ಲ, ಸ್ಥಳೀಯ ಯುವಕರೇ ಪ್ರವೀಣ್ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ : ಹಲವಡೆ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಅವರ ಕೊಲೆಗಾರರು ಕೇರಳದವರಲ್ಲ. ಆದರೆ ಕೇರಳದೊಂದಿಗೆ ನಂಟು ಹೊಂದಿರುವ ಒಂದು ಸಮುದಾಯಕ್ಕೆ ಸೇರಿದ ಸ್ಥಳೀಯ ಯುವಕರೇ ನಡೆಸಿರುವ ಕೃತ್ಯವಿದು, ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿವಾದವೇ ಹತ್ಯೆಗೆ ಮೂಲ ಕಾರಣ ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.
BIGG NEWS : ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!
ಪ್ರವೀಣ್ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡವಿದ್ದು, ವಿದೇಶಿ ಶಕ್ತಿಗಳ ಕೈವಾಡದ ಶಂಕೆಯೂ ಇದೆ. ಆರೋಪಿಗಳು ಹೊರ ದೇಶಕ್ಕೆ ತೆರಳುವ ಸಾಧ್ಯತೆ ಇದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚೆರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.