ಬೆಂಗಳೂರು : ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿದ್ದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

WATCH VIDEO: ನೆಟ್ಟಿಗರ ಮನ ಸೆಳೆದ ʻಟ್ರಾಫಿಕ್ ರೂಲ್ಸ್‌ʼ!… ಎಲ್ಲಿ ಗೊತ್ತಾ?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದು ಸರಿಯಲ್ಲ, ಸಿ.ಟಿ. ರವಿ ಸಿದ್ದರಾಮಯ್ಯ ಬಗ್ಗೆ ರಾಜಕೀಯವಾಗಿ ಮಾತನಾಡಬೇಕು. ಆದರೆ ಸಿದ್ರಾಮುಲ್ಲಾಖಾನ್ ಎಂದು ಹೇಳುವುದು ಸರಿಯಲ್ಲ.  ಸಿದ್ದರಾಮೇಶ್ವರ ದೇವರಿಂದ ಸಿದ್ದರಾಮಯ್ಯ ಹೆಸರು ಬಂದಿದೆ ಎಂದು ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಫೈಟ್ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ 15-20 ನಾಯಕರು ಸಮರ್ಥರಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆಗೆ ಒಂದು ವಿಧಾನ ಇದೆ.ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯಲಿದೆ ಎಂದರು.

BREAKING NEWS : ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದ ಬಾಲಕ ಸಾವು

Share.
Exit mobile version