ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ, ಸಿಐಡಿ ಅಧಿಕಾರಿಗಳು ಭೇಟೆ ಮುಂದುವರೆಸಿದ್ದಾರೆ. ಇದೀಗ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ ಆರೋಪದ ಮೇಲೆ 8 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಇದೀಗ ಮತ್ತೆ 8 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ಮುಂದುವರೆದು ಕಲ್ಯಾಣ ಕರ್ನಾಟಕ ಕೋಟಾದಡಿ 22ನೇ Rank ಗಳಿಸಿದ್ದಂತ ಸಿದ್ಧಗೌಡ ಎಂಬಾತನನ್ನು ಬಂಧಿಸಿದೆ. ಹೈದರಾಬಾದ್-ಕರ್ನಾಟಕ ಕೋಟಾದಲ್ಲಿ ಪ್ರಥಮ Rank ಪಡೆದಿದ್ದ ಜೇವರ್ಗಿಯ ಭಗವಂತರಾಯ ಜೋಗೂರ, 4ನೇ Rank ಪಡೆದಿದ್ದ, ಪ್ರಸ್ತುತ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಪೊಲೀಸ್ ಕಾನ್ಸ್ಟೆಬಲ್ ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ರವಿರಾಜ್, ಪೀರಪ್ಪ ಸಿದ್ನಾಳ, ಶ್ರೀಶೈಲ ಹಚ್ಚಡ, ಸೋಮನಾಥ, ವಿಜಯಕುಮಾರ್ ಎಂಬುವರನ್ನು ಬಂಧಿಸಲಾಗಿದೆ.
ಬಂಧಿತ ಎಲ್ಲ ಎಂಟು ಜನ ಅಭ್ಯರ್ಥಿಗಳು 2021 ರ ಅಕ್ಟೋಬರ್ 3 ರಂದು ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪಾಸಾಗಿದ್ದಾರೆಂದು ಈಗಾಗಲೇ ಬಂಧಿತರು ನೀಡಿದ ಸುಳಿವಿನ ಮೇರೆಗೆ ಅವರನ್ನು ಬಂಧಿಸಲಾಗಿದೆ.