ಬೆಂಗಳೂರು : ಜಾತ್ಯತೀತ ಜನತಾದಳ ಪಕ್ಷದ (JDS) ರಾಜ್ಯ ಮಟ್ಟದ ಸಾಂಸ್ಥಿಕ ಚುನಾವಣೆ ಪೂರ್ಣಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KPSC’ಯಿಂದ `ರೇಷ್ಮೆ ವಿಸ್ತರಣಾಧಿಕಾರಿ ನೇಮಕಾತಿ’ಗೆ ಅಧಿಸೂಚನೆ
ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕೇಂದ್ರದ ಮಾಜಿ ಸಚಿವರಾದ ಸಿ.ಎಂ. ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅವರ ನೇತೃತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಹೊಸ ಹುರುಪಿಗೆ ನಾಂದಿಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
@JanataDal_S ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕೇಂದ್ರದ ಮಾಜಿ ಸಚಿವರಾದ ಶ್ರೀ ಸಿ.ಎಂ. ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅವರ ನೇತೃತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಹೊಸ ಹುರುಪಿಗೆ ನಾಂದಿಯಾಗಲಿ ಎಂದು ಹಾರೈಸುತ್ತೇನೆ.1/2 pic.twitter.com/MhQKgPSKPb
— H D Kumaraswamy (@hd_kumaraswamy) August 3, 2022