ಮಂಗಳೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಲಿ, ಅಂದೇ ಅವರ ಅಂತಿಮಯಾತ್ರೆ ಎಂದು ಸಕಲೇಶಪುರದ ಆರ್ ಎಸ್ಎಸ್ ನಾಯಕ ರಘು ಎಂಬ ವ್ಯಕ್ತಿ ಬೆದರಿಕೆ ಹಾಕಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

BIGG NEWS : ಭಾರತದಾದ್ಯಂತ ನಾಳೆ ಬ್ಯಾಂಕ್ ನೌಕರರ ಮುಷ್ಕರ : ಬ್ಯಾಂಕಿಂಗ್, ಎಟಿಎಂ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ| Bank strike

ಘಟನೆ ಸಂಬಂಧ ಶಾಸಕ ತನ್ವೀರ್ ಸೇಠ್ ಅವರು ಹಾಸನ ಜಿಲ್ಲೆಯ ಸಕಲೇಶಪುರದ ರಘು ವಿರುದ್ಧ ದೂರು ದಾಖಲಿಸಿದ್ದಾರೆ, ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸುವುದಾಗಿ ಈ ಹಿಂದೆ ತನ್ವೀರ್ ಸೇಠ್ ಹೇಳಿದ್ದರು. ಹೇಳಿಕೆ ಹಿಂಪಡೆದು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಲ್ಲದೇ ಒಂದೊಮ್ಮೆ ಹೇಳಿಕೆ ಹಿಂಪಡೆಯದಿದ್ದರೆ 6X3 ಅಡಿ ಫಿಕ್ಸ್​ ಎಂದು ವಿಡಿಯೋ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಹಿಂದೂ ಕಾರ್ಯಕರ್ತನಿಂದ ತಮಗೆ ಬೆದರಿಕೆ ಇದೆ ಎಂದು ಆರೋಪಿಸಿರುವ ತನ್ವೀರ್ ಸೇಠ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

BIGG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ಬೆಳೆಯಲು ಅವಕಾಶ

Share.
Exit mobile version