ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

BIGG BREAKING NEWS : ಮಂಡ್ಯ ಜಿಲ್ಲೆಯ ರೈತರಿಗೆ ಸಿಹಿಸುದ್ದಿ : ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಮುಹೂರ್ತ ಫಿಕ್ಸ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈಬಗ್ಗೆ ಚರ್ಚೆಯೇ ಆಗಿಲ್ಲ. ನಳಿನ್ ಕುಮಾರ್ ಕಟೀಲ್ ಅವರು ಕಳೆದ 3 ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಮುಂದುವರೆಯುತ್ತೇವೆ ಎಂದು ಹೇಳಿದ್ದಾರೆ.

BIGG NEWS : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ : ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ ಬಾಲಕಿಯರು : ಶ್ರೀಗಳಿಗೆ ಸಂಕಷ್ಟ

ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈ ಮಾತನಾಡಲು ಆಗಲ್ಲ. ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ.

Video: ʻನಮ್ಮ ಗ್ರಾಮೀಣ ರಸ್ತೆಗಳಲ್ಲೂ ಹೀಗೆ ಇದ್ರೆ ಎಷ್ಟು ಚೆನ್ನʼ: ಈ ರೀತಿಯ ‘ಟ್ರನಲ್’ ನಿರ್ಮಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಆನಂದ್ ಮಹೀಂದ್ರಾ ಮನವಿ

Share.
Exit mobile version