ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

BIGG NEWS : ಬೆಂಗಳೂರಿನಿಂದ ಈದ್ಗಾ ಮೈದಾನ ವಿವಾದ ‘ ಹುಬ್ಬಳ್ಳಿಗೆ ಶಿಫ್ಟ್‌ ‘ : ಗಜಾನನ ಉತ್ಸವ ಸಮಿತಿಯಿಂದ ʻ ಹು- ಧಾ ಪಾಲಿಕೆ ಮನವಿ ʼ

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು, ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ ಎಂದು ಹೇಳಿದ್ದಾರೆ.

BREAKING NEWS : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ತಿಪಟೂರಿನಲ್ಲಿ ಬಿ.ಸಿ.ನಾಗೇಶ್ ತಿರಂಗಾ ಯಾತ್ರೆ ನಡೆಸುವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

BIG NEWS: ತ್ರಿವರ್ಣ ಧ್ವಜಕ್ಕೆ ಅವಮಾನ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿರುದ್ದ ದೂರು ದಾಖಲು

Share.
Exit mobile version