ಬೆಂಗಳೂರು : ಸ್ವಾತಂತ್ರ್ಯದ ಅಮೃತಮಹೋತ್ಸವದ ಸವಿನೆನಪಿಗಾಗಿ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಸೇರಿ ಎಲ್ಲಾ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲ-ಸಹಾಯಧನ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

BIGG BREAKING NEWS : ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಹೊಸ ಯೋಜನೆಗಳ ಘೋಷಣೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ  50 ಸಾವಿರ ರೂ. ಸಾಲದ ಸಹಾಯಧನ ಯೋಜನೆ.

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ. ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ.

ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ

Share.
Exit mobile version