ಬೆಂಗಳೂರು : ಆಗಸ್ಟ್ 12 ರ ನಾಳೆಯಿಂದ  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆಕೆಎಸ್ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ಅವಧಿ ವಿಸ್ತರಣೆ, ಸಚಿವ ಆರ್‌, ಆಶೋಕ್‌ ಘೋಷಣೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್‌ 12 ರಿಂದ ಆಗಸ್ಟ್‌ 25 ರವರೆಗೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.  ಆಗಸ್ಟ್‌ 12 ರಿಂದ ಆಗಸ್ಟ್‌ 25 ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ  ಉಚಿತವಾಗಿ ಪ್ರಯಾಣಿಸಬಹುದು. ಆದರೆ ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣದ ಅವಕಾಶವಿದೆ. ಅಂದರೆ ಪರೀಕ್ಷಾ ಅವಧಿಯಲ್ಲಿ ಮಾತ್ರ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸೇವೆ ಪಡೆಯಬಹುದು.

BIGG NEWS : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಸಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.

Share.
Exit mobile version