ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್ ಯೋಜನೆಯಡಿ ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.

Solar Eclipse 2022: ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ʻಸೂರ್ಯಗ್ರಹಣʼ: ಸೂರ್ಯಗ್ರಣದ ಸಮಯ, ಗೋಚರದ ಸ್ಥಳಗಳ ಬಗ್ಗೆ ಮಾಹಿತಿ ಇಲ್ಲಿದೆ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತಗರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರದ ಸಹಾಯದಿಂದ ಅನುಷ್ಠಾನಗೊಳಿಸಲಾಗುವ ಈ ಯೋಜನೆಯಡಿ ರಾಜ್ಯದಲ್ಲಿ 1,000 ಮೆಗಾ ವ್ಯಾಟ್ ಸಾಮರ್ಥ್ಯದ 1,000 ಸೋಲಾರ್ ಫೀಡರ್ ಗಳನ್ನು ಸ್ಥಾಪನೆ ಮಾಡಲಾಗುವುದು. ಇವುಗಳಿಂದ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಇದರಿಂದ 7 ಗಂಟೆ ನಿರಂತರ ವಿದ್ಯುತ್ ಪೂರೈಕೆಯಾಗಲಿದೆ ಎಂದರು.

Lakshmi Puja 2022: ʻಲಕ್ಷ್ಮಿ ದೇವಿʼ ಪೂಜೆ ವೇಳೆ ನಾವು ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಪ್ರಮುಖ ಮಾಹಿತಿ

ಇನ್ನು ರಾಜ್ಯದಲ್ಲಿ 3 ತಿಂಗಳಿಗೊಮ್ಮೆ ವಿದ್ಯುತ್ ಬೆಲೆ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲ ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆಯಾಗುತ್ತದೆ ಎಂದು ತಿಳಿಸಿದ್ದಾರೆ.

Share.
Exit mobile version