ಬೆಂಗಳೂರು : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ 11 ಬಲಿ : 550 ಕ್ಕೂ ಹೆಚ್ಚು ಮನೆಗಳು ಜಲಾವೃತ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 12 ಲಕ್ಷ ಮಂದಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದು, ಇದನ್ನು ಸಕ್ರಮ ಮಾಡುವ ಕುರಿತಂತೆ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವಾಗುವ ಸಾಧ್ಯತೆ ಇದೆ. ತೆರವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಸಕ್ರಮಗೊಳಿಸುವ ಕೆಲಸ ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ.

BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ

Share.
Exit mobile version