ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನೌಕರರ ಪರಸ್ಪರ ಅಂತರ ನಿಗಮ ವರ್ಗಾವಣೆಯ ಬೇಡಿಕೆಯನ್ನು ಈಡೇರಿಸಿತ್ತು. ಇದರಂತೆ ಇದೀಗ ದರ್ಜೆ-3, ದರ್ಜೆ -4ರ ನೌಕರರು ವರ್ಗಾವಣೆಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು, ವರ್ಗಾವಣೆಗೊಳಿಸಿ ಆದೇಶಿಸಿದೆ.
BIG NEWS: ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ಕಕರಸಾ ಸಂಸ್ಥೆ ಮತ್ತು ವಾಕರಸಾ ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಕೋರಿಕೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.
ಹೀಗೆ ಸಲ್ಲಿಸಿದ್ದಂತ 862 ನೌಕರರ ಅರ್ಜಿಗಳಲ್ಲಿ 712 ನೌಕರರು ಪರಸ್ಪರ ಕೋರಿಕೆ ಮೇರೆಗೆ ಅಂತರ ನಿಗಮ ವರ್ಗಾವಣೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್ ಸೈಟ್ ನಲ್ಲಿಯೂ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.