ಶಿವಮೊಗ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಆರೋಪ ಸುಳ್ಳಾಗಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.

BIGG NEWS : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳಲ್ಲಿ ಟಿಕೆಟ್ ದರ ಮೂರು ಪಟ್ಟು ಹೆಚ್ಚಳ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಮುರುಘಾಮಠ ರಾಜ್ಯದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಶ್ರೀಗಳ ವಿರುದ್ಧ ಆರೋಪ ತಿಳಿದು ಬೇಸರ ಆಯ್ತು, ಇದೊಂದು ಅನಿಷ್ಟ ಸುದ್ದಿ, ಶ್ರೀಗಳ ವಿರುದ್ಧದ ಆರೋಪ ಸುಳ್ಳಾಗಲಿ ಎಂದು ಪ್ರಾರ್ಥಿಸುವೆ. ಇದಕ್ಕೆ ಕಾರಣ ಯಾರು ಅನ್ನೋದು ತನಿಖೆ ಬಳಿಕ ಗೊತ್ತಾಗಲಿದೆ. ತನಿಖೆ ಬಳಿಕ ಏನು ವರದಿ ಬರತ್ತೋ ಅದನ್ನು ನಾವು ಒಪ್ಪಬೇಕು ಎಂದಿದ್ದಾರೆ.

BIGG NEWS : ಮುರುಘಾಮಠದ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Share.
Exit mobile version