ಚಿಕ್ಕಬಳ್ಳಾಪುರ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ಮಾತನಾಡುವ ಮುನ್ನ ಇತಿಹಾಸ ತಿಳಿದುಕೊಳ್ಳಲಿ ಎಂದು ಸಚಿವ ಡಾ.ಕೆ. ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

BIGG NEWS : ಕೊಡಗಿನಲ್ಲಿ ನಿಲ್ಲದ ʻ ಮಳೆಯ ಅರ್ಭಟ ʼ : ಬಿರುನಾಣಿ ರಸ್ತೆಯ ಬದಿ 30 ಅಡಿಯಷ್ಟು ಭೂಕುಸಿತ , ಸಂಪರ್ಕ ರಸ್ತೆ ಕಡಿತ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ವೀರ ಸಾವರ್ಕರ್ ​ರವರ ಇತಿಹಾಸವನ್ನು ತಿಳಿದುಕೊಳ್ಳಲಿ. ವೀರ ಸಾವರ್ಕರ್ ಬಗ್ಗೆ ಮಾತನಾಡುವ ನೈತಿಕತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಇಲ್ಲ. ಸಮಾಜವಾದಿ ಹಿನ್ನಲೆಯ ಸಿದ್ದರಾಮಯ್ಯ ಹೊಗಳು ಭಟ್ರು ಆಗಿರುವುದು ದುರಾದೃಷ್ಟಕರ ಎಂದು ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ದಕ್ಷ ನಾಯಕತ್ವದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್‌ನ ಡಬಲ್‌ ಡೋರ್‌ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆಂದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.

BIGG NEWS: ಅಟಲ್ ಪಿಂಚಣಿ ಯೋಜನೆ ಹೊಸ ನಿಯಮ: ಹೂಡಿಕೆದಾರರು ಅಕ್ಟೋಬರ್ ನಿಂದ ಸೇರುವಂತಿಲ್ಲ

Share.
Exit mobile version