ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIGG NEWS : `CET’ ಫಲಿತಾಂಶದ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್‍ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.

Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ

ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಜು.31ರೊಳಗೆ ಇ-ಕೆವೈಸಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ದೂ.08392-276224ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Share.
Exit mobile version