ಬೆಳಗಾವಿ : ಕರ್ನಾಟಕದೊಂದಿಗಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಸರ್ಕಾರವು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಮಹಾರಾಷ್ಟ್ರ ಸರ್ಕಾರವು ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ ಅವರು, ಕರ್ನಾಟಕಕ್ಕೆ ಹೋಗುವ ಪ್ರಯಾಣಿಕರನ್ನು ರಕ್ಷಿಸಲು ಮತ್ತು ಅವರ ಆಸ್ತಿಯನ್ನು ಹಾನಿಯಿಂದ ರಕ್ಷಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,ಪೊಲೀಸರ ಸಲಹೆಯ ನಂತರ ಸಾರಿಗೆ ನಿಗಮವು ಬಸ್ ಸೇವೆಯನ್ನು ನಿಲ್ಲಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ಮಹಾರಾಷ್ಟ್ರದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನಗಳ ಮೇಳೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬೂತ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕಾರ್ಯಕರ್ತರು ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ‘ಜೈ ಮಹಾರಾಷ್ಟ್ರ’ ಘೋಷಣೆಗಳನ್ನು ಸಹ ಬರೆಯಲಾಗಿತ್ತು.