ದಾವಣಗೆರೆ : ದಾವಣಗೆರೆಯಲ್ಲಿ ಇಂದು ಬಹುನಿರೀಕ್ಷಿತ ಸಿದ್ದಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಗೈರುಹಾಜರಾಗಲಿದ್ದಾರೆ.

ಕಟ್ಟಡ ಕಾಮಗಾರಿ ವೇಳೆ ಘೋರ ದುರಂತ: ಟವರ್ ಕ್ರೇನ್‌ನಿಂದ ಬಿದ್ದ ನಾಲ್ವರು ಕಾರ್ಮಿಕರ ದುರಂತ ಅಂತ್ಯ, ಓರ್ವನ ಸ್ಥಿತಿ ಗಂಭೀರ

ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರು ಹಾಜರಾಗಲಿದ್ದಾರೆ. ಖರ್ಗೆ ಅವರು ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಯಂಗ್ ಇಂಡಿಯಾ ಅಧ್ಯಕ್ಷರಾಗಿದ್ದು, ಇಡಿ ದಾಳಿ ಹಿನ್ನೆಲೆಯಲ್ಲಿ ಅವರು ದೆಹಲಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಬರುವುದಿಲ್ಲ ಎನ್ನಲಾಗಿದೆ.

Good News : ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಇನ್ನು ಕೋಲಾರ ರಾಜಕೀಯಕ್ಕೆ ಸಂಬಂಧಿಸಿದಂತೆ ಕೆ.ಹೆಚ್. ಮುನಿಯಪ್ಪ ಮುನಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಕೊತ್ತೂರು ಮಂಜುನಾಥ್ ಸೇರಿದಂತೆ ಇತರರು ಕಾಂಗ್ರೆಸ್ ಪಕ್ಷ ಸೇರ್ಪಡೆ ವೇಳೆಯಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಮುನಿಯಪ್ಪ ಅಸಮಾಧಾನಗೊಂಡಿದ್ದಾರೆ. ಈ ಕಾರಣದಿಂದ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಹೇಳಲಾಗುತ್ತಿದೆ.

ʻಅಮ್ಮಾ ನನಗೆ ಹಸಿವಾಗ್ತಿದೆ, ಎದ್ದೇಳು ಊಟ ಕೊಡುʼ: ಮೃತಪಟ್ಟ ತಾಯಿಯ ಬಳಿ ಗೋಗರೆದ ಬಾಲಕ

Share.
Exit mobile version