ಮಂಡ್ಯ: ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.
ಅವರು ಮಂಡ್ಯದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ. ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ. ಯಾವುದೇ ಒತ್ತಡ ಬಂದರೂ ನಾನು ನಿಲ್ಲಲ್ಲ ಎಂದು ಹೇಳಿದರು. ಇನ್ನೂ ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ನಾನು ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೂ ಭೇಟಿ ಕೊಡುತ್ತೇನೆ ಎಂದರು.