ಮೈಸೂರು : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್‌  ನಡೆಸುತ್ತಿದ್ದು, ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.  ಚಿಕ್ಕಹೊಮ್ಮಗ್ರಾಮದ ಕೆರೆಗೆ  ಪುತ್ರ ಯತೀಂದ್ರ ಜೊತೆಗೆ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಿದರು.

ಭಾರತದ ಬಗ್ಗೆ ಪೂರ್ವಾಗ್ರಹ ಪೀಡಿತ ವರದಿ ಮಾಡಿದ್ದಕ್ಕಾಗಿ ಯುಎಸ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಎಸ್ ಜೈಶಂಕರ್

ಸಿದ್ದರಾಮಯ್ಯ ಅವರು ತಮ್ಮ ಪುತ್ರ, ಶಾಸಕ ಯತೀಂದ್ರ ಜೊತೆಗೆ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಈ ವೇಳೆ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಕೆರೆಗೆ ತೆರಳಿ ಬಾಗಿನ ಅರ್ಪಿಸಿದ್ದರೆ. ಈ ವೇಳೆ ಶಾಸಕ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕಾಂಗ್ರೆಸ್‌ ನಾಯಕರ ಜತೆಗೆ ಭರ್ಜರಿ ಉಪಹಾರ ಸೇವನೆ ಮಾಡಿದರು. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದ ಪ್ರಸಂಗವೂ ನಡೆಯಿತು.

Share.
Exit mobile version