ಬೆಂಗಳೂರುವ : ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಡೆಯುತ್ತಿರುವ ಕಠಿಣ ಮತ್ತು ನಿಷ್ಪಕ್ಷಪಾತ ತನಿಖೆಯೇ ನಿದರ್ಶನ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ನಿಮ್ಮ ಕುತ್ತಿಗೆಯಲ್ಲೂ ಈ ರೀತಿಯ ಕೊಳೆ ಹೆಚ್ಚಾಗ್ತಿದ್ಯಾ? ʻ ನೈಸರ್ಗಿಕ ಮನೆಮದ್ದುʼಗಳ ಬಳಕೆ ರಾಮಬಾಣ | Neck Care by Home Remedy

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಡೆಯುತ್ತಿರುವ ಕಠಿಣ ಮತ್ತು ನಿಷ್ಪಕ್ಷಪಾತ ತನಿಖೆಯೇ ನಿದರ್ಶನ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಸೇರಿದಂತೆ 50 ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸಿರುವ ದಿಟ್ಟ ಕ್ರಮಕ್ಕೆ ತನಿಖಾ ತಂಡ ಮತ್ತು ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ  ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ನಿರ್ದಾಕ್ಷಿಣ್ಯ ತನಿಖೆಗೆ ಆದೇಶಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನು ಬೇರು ಸಮೇತ ನಿರ್ಮೂಲನೆ ಮಾಡುವ ಅಚಲ ರಾಜಕೀಯ ಇಚ್ಚಾಶಕ್ತಿ ಮತ್ತು ಬದ್ಧತೆ ತೋರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಭಾಗವಾಗಿರಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದ್ದಾರೆ.

Share.
Exit mobile version