ಕಲಬುರಗಿ : ರಾಜ್ಯ ಸರ್ಕಾರವು ಆ್ಯಸಿಡ್ ಸಂತ್ರಸ್ತರಿಗೆ 10 ಸಾವಿರ ರೂ. ಪಿಂಚಣಿ ನೀಡಲಾಗುತ್ತಿದ್ದು, ಅವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಉಚಿತ ಸೈಟ್ ನೀಡಿ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

BIGG NEWS : ಕಂದಾಯ ಗ್ರಾಮಗಳಾಗಿ ತಾಂಡ, ಹಟ್ಟಿ : ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೇ ಜಾರಿ : ಕಂದಾಯ ಸಚಿವ ಆರ್. ಅಶೋಕ್ ಘೋಷಣೆ

ಶನಿವಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

BIGG NEWS: ವಿಜಯಪುರದಲ್ಲಿ ಕೆಲವೆಡೆ ಭೂಕಂಪ; ಆತಂಕದಲ್ಲಿ ಜನರು

ಯಾಸಿಡ್ ಸಂತ್ರಸ್ತರಿಗೆ ಈ ಹಿಂದೆ 3 ಸಾವಿರ ರೂ. ಪಿಂಚಣಿ ಕೊಡಲಾಗುತಿತ್ತು, ಅದನ್ನು ಈಗ 10 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಿದೆ. ಇದಲ್ಲದೆ ಅವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಉಚಿತ ಸೈಟ್ ನೀಡಿ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗುವುದು. ಸ್ವಯಂ ಉದ್ಯೋಗ ಮಾಡಲು ಸಂತ್ರಸ್ತರು  ಮುಂದೇ ಬಂದಲ್ಲಿ 5 ಲಕ್ಷ ರೂ. ವರೆಗೆ  ಧನಸಹಾಯ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವರು ಹೇಳಿದರು.

Share.
Exit mobile version