ಬೆಂಗಳೂರು : 2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಾಯ್ದೆ-1996 ನಿಯಮ -37 ರನ್ವಯ, ಶಾಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯ ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯವಾಗಿದೆ.
Rain in Karnataka : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಕೋವಿಡ್ ಹಿನ್ನೆಲೆಯಲ್ಲಿ 2020-21 ಸಾಲಿನ ಶೈಕ್ಷಣಿ ವರ್ಷದಲ್ಲಿ ಶಾಲೆಗಳು ದಿನಾಂಕ 01-01-2021 ರಿಂದ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಳೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಈ ಸಂಬಂಧ ಸರ್ಕಾರದ ಆದೇಶ ಸಂಖ್ಯೆ ಇಪಿ 24 ಎಸ್ಎಲ್ ಬಿ 2021 ದಿನಾಂಕ 01-02-2021 ರಿಂದ ರಾಜ್ಯದಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿತ್ತು. ಈ ವರ್ಷ ಎಸ್ ಎಸ್ಎಲ್ ಸಿ ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಲಾಗಿದೆ.
BREAKING NEWS : ಅಮೆರಿಕಾದ ಗ್ಯಾರಿ ನಗರದಲ್ಲಿ ಗುಂಡಿನ ದಾಳಿ ; ಮೂವರು ಸಾವು, 7 ಜನರಿಗೆ ಗಾಯ