• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada News | India News | Breaking news | Live news | Kannada | Kannada News | Karnataka News | Karnataka NewsKannada News | India News | Breaking news | Live news | Kannada | Kannada News | Karnataka News | Karnataka News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»Uncategorized»BIGG NEWS : ಡಿ.1ರಂದು `ಸುಶಾಸನ ಮಾಸಾಚರಣೆ’ : 10 ಸಾವಿರ ಜನರಿಗೆ ಉದ್ಯೋಗ ಪತ್ರ
Uncategorized

BIGG NEWS : ಡಿ.1ರಂದು `ಸುಶಾಸನ ಮಾಸಾಚರಣೆ’ : 10 ಸಾವಿರ ಜನರಿಗೆ ಉದ್ಯೋಗ ಪತ್ರ

By KNN IT TEAMNovember 25, 6:33 am

ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ‘ಸುಶಾಸನ ಮಾಸ’ವನ್ನು ಆಚರಿಸಲಾಗುವುದು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr C.N Ashwathnarayana ) ತಿಳಿಸಿದ್ದಾರೆ.

SHOCKING NEWS : ಮತ್ತೊಂದು ‘ಹೊಸ ವೈರಸ್’ ಎಂಟ್ರಿ, ಬಾವಲಿಗಳಲ್ಲಿ ‘ಕಿವಿರಾ’ ದೃಢ, ಇದೆಷ್ಟು ಮಾರಣಾಂತಿಕ ಗೊತ್ತಾ.?

ಈ ಸಂಬಂಧವಾಗಿ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳನ್ನು ಕುರಿತು ಚರ್ಚಿಸಲು ಅವರು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಮಹತ್ತ್ವದ ಸಭೆ ನಡೆಸಿದರು.

ನಂತರ ಮಾತನಾಡಿದ ಅವರು, ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು‌ ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದರು.

ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್‌ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳನ್ನು ಆಯೋಜಿಸಲು ಸಚಿವರು ಸೂಚಿಸಿದರು. ಜತೆಗೆ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಏಳು ಹೊಸ ವಿ.ವಿ.ಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು ಎಂದು ಅವರು ವಿವರಿಸಿದರು.

ಬದಲಾದ ಕಾಲಮಾನದಲ್ಲಿ ಎಲ್ಲ ಇಲಾಖೆಗಳೂ ಸುಸ್ಥಿರ ಮತ್ತು ಪಾರದರ್ಶಕ ಮಾದರಿಯಲ್ಲಿ ಉತ್ತರದಾಯಿತ್ವದೊಂದಿಗೆ ಕೆಲಸ ಮಾಡಬೇಕಾದ ಸವಾಲಿದೆ. ಇದಕ್ಕಾಗಿ ಮೂರೂ ಇಲಾಖೆಗಳಲ್ಲಿ ಸೋಶಿಯಲ್‌ ಮೀಡಿಯಾವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಸಂಸ್ಕೃತಿಯನ್ನು ತರಲಾಗುವುದು ಎಂದು ಅವರು ನುಡಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ಬಡ್ತಿ ಇತ್ಯಾದಿ ವಿಚಾರಗಳು ಬಹುಕಾಲದಿಂದ ನನೆಗುದಿಗೆ ಬಿದ್ದಿವೆ. ಸುಶಾಸನ ಮಾಸಾಚರಣೆ ಸಂದರ್ಭದಲ್ಲಿ ಅವುಗಳನ್ನು ಬಗೆಹರಿಸಲಾಗುವುದು. ಇದರ ಜತೆಗೆ ಸುಗಮ ಮತ್ತು ಉತ್ತಮ ಆಡಳಿತದ ಅಂಗವಾಗಿ ತಂದಿರುವ ಸಮಗ್ರ ವಿವಿ ನಿರ್ವಹಣಾ ತಂತ್ರಾಂಶದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ‌ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ‌ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ ಸೇರಿದಂತೆ ಇತರರು ಇದ್ದರು.

blank
Share. Facebook Twitter LinkedIn WhatsApp Email

Related Posts

ಪತ್ನಿ 18 ಅಥವಾ ಅದಕ್ಕಿಂತ ಮೇಲ್ಪಟ್ಟಿದ್ದರೆ ವೈವಾಹಿಕ ಅತ್ಯಾಚಾರ ‘ಅಪರಾಧ’ ಅಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

December 09, 5:43 pm

ಒಡಿಶಾ: ಭುವನೇಶ್ವರ-ಹೌರಾ ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

December 07, 8:55 am

ಗ್ಯಾರಂಟಿ ದೊರಕದ ಫಲಾನುಭವಿಗಳಿಗೆ ‘ಗುಡ್ ನ್ಯೂಸ್’ : ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ

December 07, 5:22 am
Recent News
blank

BIG NEWS : ಚಿಕ್ಕಬಳ್ಳಾಪುರದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು: 4 ಸಾವು

December 10, 5:36 am
blank

BREAKING : ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ : ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ,

December 10, 5:26 am
blank

ಕನ್ನಡಿಗರಿಗೆ ಸಿಹಿ ಸುದ್ದಿ: ಕೈಗಾರಿಕೆಗಳಲ್ಲಿನ ‘D’ ಗ್ರೂಪ್‌ ಹುದ್ದೆ ಶೇಕಡಾ 70-100ರಷ್ಟು ಉದ್ಯೋಗ ಮೀಸಲು

December 10, 5:00 am
blank

‘ಚಿಕನ್ ಡಿಶ್’ನಲ್ಲಿ ‘ಜಿರಳೆ’ ಪತ್ತೆ ; ಬೆಂಗಳೂರು ನಿವಾಸಿ ಕಕ್ಕಾಬಿಕ್ಕಿ

December 09, 10:10 pm
State News
don't tick

ಜನಸಾಹಿತ್ಯ ಸಮ್ಮೇಳನ: ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು – ಡಾ. ಮೂಡ್ನಾಕೂಡು ಚಿನ್ನಸ್ವಾಮಿ

By KNN IT TEAMJanuary 08, 12:19 pm0

ಬೆಂಗಳೂರು: ಕನ್ನಡ ಭಾಷೆಗೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಕವಿರಾಜಮಾರ್ಗಕಾರನ ಮತ್ತೆ ಮತ್ತೆ ನೆನೆಯಬೇಕಾದ ಮಾತು ‘ಕಸವರನೆಂಬುದು ನೆರೆ ಸೈರಿಸಲಾರ್ಪೊಡೆ…

blank

BIGG NEWS: ಜಾನುವಾರುಗಳಿಗೆ ಚರ್ಮಗಂಟು ರೋಗ ಹಿನ್ನೆಲೆ; ಐತಿಹಾಸಿಕ ಪ್ರಸಿದ್ಧ ಬೂಕನಬೆಟ್ಟ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು

January 08, 12:19 pm
blank

BIGG NEWS :ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ಸ್ಪಷ್ಟನೆ

January 08, 12:09 pm
blank

ಕರ್ನಾಟಕ ಅಂದ್ರೇ ಮೋದಿ ಸರ್ಕಾರಕ್ಕೆ ಗೌರವಿಲ್ಲ: ಈ ಡಬಲ್ ಇಂಜಿನ್ ಸರ್ಕಾರ ಕಿತ್ತೊಗೆಯಬೇಕು – ಡಿಕೆಶಿ

January 08, 11:47 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.