ಬೆಂಗಳೂರು : ಹೆಣ್ಣುಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹೆಣ್ಣು ಮಕ್ಕಳ ಸ್ವಚ್ಛ ಹಾಗೂ ಸುರಕ್ಷಿತ ಋತುಚಕ್ರ ನಿರ್ವಹಣೆಗಾಗಿ ಸರ್ಕಾರ ತರುತ್ತಿರುವ ಮೈತ್ರಿ ಮುಟ್ಟಿನ ಕಪ್ ಯೋಜನೆಯನ್ನು ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇಂದು ಚಾಲನೆ ನೀಡಲಾಗುತ್ತಿದೆ.
ಮೈತ್ರಿಕಪ್ ಯೋಜನೆಗೆ ಜು.6 ರ ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದೆ. ಸರ್ಕಾರದ ಶುಚಿ ಕಾರ್ಯಕ್ರಮದ ಯೋಜನೆಯಡಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಈ ಹಿಂದಿನಿಂದಲೂ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಈ ಯೋಜನೆಯು ರಾಜ್ಯಾದ್ಯಂತ ಸುಮಾರು 19 ಲಕ್ಷ ಹದಿಹರೆಯದವರನ್ನು ಒಳಗೊಂಡಿದೆ. ಪ್ರತಿವರ್ಷ ಸರಾಸರಿ 2.23 ಕೋಟಿ ಯೂನಿಟ್ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ವಿತರಿಸಲಾಗುತ್ತಿದೆ.
BIGG NEWS : ಶೀಘ್ರವೇ ರಾಜ್ಯಕ್ಕೆ `ಹೊಸ ಉದ್ಯೋಗ ನೀತಿ’ : ಸಿಎಂ ಬಸವರಾಜ ಬೊಮ್ಮಾಯಿ
ಮೈತ್ರಿ ಕಪ್ ಗಳನ್ನು 8 ರಿಂದ 12 ಗಂಟೆಗಳ ಅವಧಿವರೆಗೆ ಬಳಸಬಹುದು. ಸಮರ್ಪಕವಾಗಿ ನಿರ್ವಹಣೆ ಮಾಡಿದರೆ ಕನಿಷ್ಟ 8 ರಿಂದ 10 ವರ್ಷಗಳ ವರೆಗೆ ಸಮರ್ಥನಿಯವಾಗಿ ಮರುಬಳಕೆ ಮಾಡಬಹದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
BIGG NEWS : ದಾವಣಗೆರೆಯಲ್ಲಿ ಆಗಸ್ಟ್ 3 ರಂದು `ಸಿದ್ದರಾಮೋತ್ಸವ’ ಕಾರ್ಯಕ್ರಮ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಗಿ
ಇದರ ಮುಂದುವರೆದ ಭಾಗವಾಗಿ ನೂತನ ಹಾಗೂ ಪರಿಸರ ಸ್ನೇಹಿಯಾದ ಮುಟ್ಟಿನ ಕಪ್ ಅನ್ನು ಹೆಣ್ಣು ಮಕ್ಕಳಿಗೆ ವಿತರಿಸಲಾಗುತ್ತಿದೆ. ಈ ಬಾರಿಯ ಬಜೆಟ್ ನಲ್ಲಿಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಯೋಜನೆಯನ್ನು ಘೋಷಿಸಿದ್ದರು.