ಬೆಂಗಳೂರು : ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಇಂದಿನ ರೌಡಿಗಳೇ ಭವಿಷ್ಯದ ಬಿಜೆಪಿ ಮುಖಂಡರು ಎಂದು ರಾಜ್ಯ ಬಿಜೆಪಿ ವಿರುದ್ಧ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಹದೇವಪ್ಪ ಅವರು, ಚುನಾವಣೆ ಹೊತ್ತಲ್ಲಿ ಏನೇನೋ ಸಮರ್ಥನೆ ಕೊಟ್ಟು 30-40 ಕೊಲೆ ಮಾಡಿದಂತಹ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ಮುಂದೆ ಭಯೋತ್ಪಾದಕರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ ಎಂಬ ಆತಂಕ ನನ್ನದು ಎಂದು ಹೇಳಿದ್ದಾರೆ.

ಅದರಲ್ಲೂ ಬಿಜೆಪಿಯ  ಸಿ.ಟಿ. ರವಿ ಅವರು ಬೇರೆ ಇಸ್ಲಾಮಾಬಾದ್ ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಎಂದು ಆಗಾಗ್ಗೆ ಹೇಳುವುದನ್ನು ನೋಡಿದರೆ ಮೇಲಿನ ಮಾತು ವಾಸ್ತವಕ್ಕೆ ಹತ್ತಿರವಿದೆಯೇನೋ ಅನಿಸುತ್ತದೆ, ಎಷ್ಟೇ ಆದರೂ ಗೋಡ್ಸೆಯಂತಹ ದೇಶಕ್ಕೆ ಮೊದಲ ಭಯೋತ್ಪಾದಕನನ್ನು ನೀಡಿದ ಸಂತತಿ ಅಲ್ಲವೇ? ಇವರಿಂದ ಇನ್ನೇನು ನಿರೀಕ್ಷಿಸಬಹುದು ಎಂದು ಕಿಡಿಕಾರಿದ್ದಾರೆ.

BIGG NEWS : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ : ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನ

Share.
Exit mobile version